Featured

ಉಡುಪಿ:  ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ:  ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಪಿಲ್ ಮಾಡಿ ಕಳುಹಿಸಿ ಎಂಬುದಾಗಿ ಸಂದೇಶ ಕಳುಹಿಸಿದ್ದನು.

ಅದರ ನಂತರ ವಿವಿಧ ಲಿಂಕ್‌ಗಳನ್ನು ಕಳುಹಿಸಿದ್ದು, ಅದರಲ್ಲಿ ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು. ಟಾಸ್ಕ್ ಮಾಡಿರುವುದಕ್ಕೆ ಹಣವನ್ನು ಕೂಡ ಹಾಕಲಾಗಿತ್ತು. ಡಿ.1ರಂದು ಇನ್ನೊಂದು ಲಿಂಕ್ ಕಳುಹಿಸಿದ್ದು, ಅದನ್ನು ಒತ್ತಿದಾಗ ಟೆಲಿಗಾಮ್ ಖಾತೆ ಓಪನ್ ಆಗಿತ್ತು. ಅದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ವಿಜಯಲಕ್ಷ್ಮೀ, ಆರೋಪಿತರು ತಿಳಿಸಿದಂತೆ ಡಿ.1ರಿಂದ ಡಿ.4ರವರೆಗೆ ಒಟ್ಟು 31,00,067ರೂ. ಹಣವನ್ನು ಪಾವತಿ ಮಾಡಿದ್ದರು. ಆದರೆ ಈವರೆಗೆ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಅದರ ಲಾಭಾಂಶವನ್ನಾಗಲೀ ನೀಡದೆ ವಂಚಿಸಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago