ಉಡುಪಿ: ಆನ್ಲೈನ್ ಟ್ರೇಡಿಂಗ್ ಮೂಲಕ ದುಪ್ಪಟ್ಟು ಲಾಭಾಂಶ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 18,59,500 ರೂ. ವಂಚಿಸಿರುವ ಘಟನೆ ನಡೆಸಿದೆ.
ಬ್ರಹ್ಮಾವರ ತಾಲೂಕಿ ಚೇರ್ಕಾಡಿ ಗ್ರಾಮದ ರವೀಂದ್ರ (31) ಅವರು ಕೆನರಾ ಬ್ಯಾಂಕ್ ನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದರು. ಅವರು ರವೀಂದ್ರ ಎಂಬ ಟೆಲಿಗ್ರಾಮ್ ಐಡಿ ಹೊಂದಿದ್ದು, ಯಾರೋ ಅಪರಿಚಿತ ವ್ಯಕ್ತಿ 2004 ಎಂಬ ಟೆಲಿಗ್ರಾಮ್ ಗ್ರೂಪ್ಗೆ ಅವರನ್ನು ಸುಮಾರು 8 ತಿಂಗಳ ಹಿಂದೆ ಸೇರಿಸಿದ್ದು, ಈಗ್ರೂಪ್ನಲ್ಲಿ KELLY ಮೊ. ನಂಬ್ರ 7447418627 ನೇರವರು ಟ್ರೇಡಿಂಗ್ ಅಕೌಂಟ್ ಕ್ರಿಯೆಟ್ ಮಾಡಿದಲ್ಲಿ ಹಣಗಳಿಸುವ ವಿಧಾನದ ಬಗ್ಗೆ ಹೇಳಿ ಕೊಡುವುದಾಗಿ ಮೆಸೇಜ್ ಕಳುಹಿಸಿಸುತ್ತಿದ್ದರು. ಅನಂತರ ರವೀಂದ್ರ ಅವರಿಗೆ 7447418627 ದೂರವಾಣಿಯಿಂದ ಟೆಲಿಗ್ರಾಂ ಐಡಿಗೆ ಪರ್ಸನಲ್ ಆಗಿ ಮೆಸೇಜ್ ಮಾಡಿ ಟ್ರೇಡಿಂಗ್ ಬಗ್ಗೆ ತಿಳಿಸಿಕೊಡುವುದಾಗಿ ಹಾಗೂ ಟ್ರೇಡಿಂಗ್ನಿಂದ ಬಂದ ಲಾಭಾಂಶದ ವಿವರಗಳ ಬಗ್ಗೆ ಗ್ರೂಪ್ನಲ್ಲಿ ಮಾಹಿತಿ ನೀಡುವುದಾಗಿ ತಿಳಿಸಿದ್ದರು.
ಅವರ ಬಳಿ WI INDEX(http://h5.wealthindex.help) ವೆಬ್ಸೈಟ್ನಲ್ಲಿ ಲಾಗಿನ್ ಆಗಿ ಅಕೌಂಟ್ ಕ್ರಿಯೇಟ್ ಮಾಡಲು ತಿಳಿಸಿದಂತೆ ರವೀಂದ್ರ ಅವರು ತನ್ನ ಹೆಸರಿನಲ್ಲಿ ಟ್ರೇಡಿಂಗ್ ಅಕೌಂಟ್ ಕ್ರಿಯೇಟ್ ಮಾಡಿರುತ್ತಾರೆ. ಅನಂತರ 2004 ಎಂಬ ಟೆಲಿಗ್ರಾಂ ಗ್ರೂಪ್ನಲ್ಲಿ ಅಪರಿಚಿತ ವ್ಯಕ್ತಿ KELLY ಎಂಬವರು ಟ್ರೇಡಿಂಗ್ ನಲ್ಲಿ ಲಾಭಾಂಶ ಗಳಿಸುವ ಬಗ್ಗೆ ಮಾಹಿತಿ ನೀಡುತ್ತಿದ್ದು ಅದನ್ನು ರವೀಂದ್ರ ಅವರು ನಂಬಿ ಅವರು ಹೇಳಿದ ವಿವಿಧ ಖಾತೆಗೆ ಹಂತ ಹಂತವಾಗಿ 18,59,500 ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಅನಂತರ ರವೀಂದ್ರ ಅವರು ಹಾಕಿದ ಹಣವಾಗಲಿ, ಲಾಭಾಂಶವಾಗಲಿ ಈವರೆಗೆ ಆರೋಪಿತರು ನೀಡದೇ ನಂಬಿಸಿ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…