Featured

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಾಂಶದ ಆಸೆ ; ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಾಂಶದ ಆಸೆ ; ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ದುಪ್ಪಟ್ಟು ಲಾಭಾಂಶ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 18,59,500 ರೂ. ವಂಚಿಸಿರುವ ಘಟನೆ ನಡೆಸಿದೆ.

ಬ್ರಹ್ಮಾವರ ತಾಲೂಕಿ ಚೇರ್ಕಾಡಿ ಗ್ರಾಮದ ರವೀಂದ್ರ (31) ಅವರು ಕೆನರಾ ಬ್ಯಾಂಕ್ ನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದರು. ಅವರು ರವೀಂದ್ರ ಎಂಬ ಟೆಲಿಗ್ರಾಮ್ ಐಡಿ ಹೊಂದಿದ್ದು, ಯಾರೋ ಅಪರಿಚಿತ ವ್ಯಕ್ತಿ 2004 ಎಂಬ ಟೆಲಿಗ್ರಾಮ್ ಗ್ರೂಪ್‌ಗೆ ಅವರನ್ನು ಸುಮಾರು 8 ತಿಂಗಳ ಹಿಂದೆ ಸೇರಿಸಿದ್ದು, ಈಗ್ರೂಪ್‌ನಲ್ಲಿ KELLY ಮೊ. ನಂಬ್ರ 7447418627 ನೇರವರು ಟ್ರೇಡಿಂಗ್ ಅಕೌಂಟ್ ಕ್ರಿಯೆಟ್ ಮಾಡಿದಲ್ಲಿ ಹಣಗಳಿಸುವ ವಿಧಾನದ ಬಗ್ಗೆ ಹೇಳಿ ಕೊಡುವುದಾಗಿ ಮೆಸೇಜ್ ಕಳುಹಿಸಿಸುತ್ತಿದ್ದರು. ಅನಂತರ ರವೀಂದ್ರ ಅವರಿಗೆ 7447418627 ದೂರವಾಣಿಯಿಂದ ಟೆಲಿಗ್ರಾಂ ಐಡಿಗೆ ಪರ್ಸನಲ್ ಆಗಿ ಮೆಸೇಜ್ ಮಾಡಿ ಟ್ರೇಡಿಂಗ್ ಬಗ್ಗೆ ತಿಳಿಸಿಕೊಡುವುದಾಗಿ ಹಾಗೂ ಟ್ರೇಡಿಂಗ್‌ನಿಂದ ಬಂದ ಲಾಭಾಂಶದ ವಿವರಗಳ ಬಗ್ಗೆ ಗ್ರೂಪ್‌ನಲ್ಲಿ ಮಾಹಿತಿ ನೀಡುವುದಾಗಿ ತಿಳಿಸಿದ್ದರು.

ಅವರ ಬಳಿ WI INDEX(http://h5.wealthindex.help) ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಿ ಅಕೌಂಟ್ ಕ್ರಿಯೇಟ್ ಮಾಡಲು ತಿಳಿಸಿದಂತೆ ರವೀಂದ್ರ ಅವರು ತನ್ನ ಹೆಸರಿನಲ್ಲಿ ಟ್ರೇಡಿಂಗ್ ಅಕೌಂಟ್ ಕ್ರಿಯೇಟ್ ಮಾಡಿರುತ್ತಾರೆ. ಅನಂತರ 2004 ಎಂಬ ಟೆಲಿಗ್ರಾಂ ಗ್ರೂಪ್‌ನಲ್ಲಿ ಅಪರಿಚಿತ ವ್ಯಕ್ತಿ KELLY ಎಂಬವರು ಟ್ರೇಡಿಂಗ್ ನಲ್ಲಿ ಲಾಭಾಂಶ ಗಳಿಸುವ ಬಗ್ಗೆ ಮಾಹಿತಿ ನೀಡುತ್ತಿದ್ದು ಅದನ್ನು ರವೀಂದ್ರ ಅವರು ನಂಬಿ ಅವರು ಹೇಳಿದ ವಿವಿಧ ಖಾತೆಗೆ ಹಂತ ಹಂತವಾಗಿ 18,59,500 ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಅನಂತರ ರವೀಂದ್ರ ಅವರು ಹಾಕಿದ ಹಣವಾಗಲಿ, ಲಾಭಾಂಶವಾಗಲಿ ಈವರೆಗೆ ಆರೋಪಿತರು ನೀಡದೇ ನಂಬಿಸಿ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

10 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

10 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

10 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

12 hours ago