ಉಡುಪಿ : ಆನ್ಲೈನ್ ಮೂಲಕ ಟಾಸ್ಕ್ ಪೂರೈಸಿ ಹೆಚ್ಚಿನ ಹಣ ಗಳಿಸುವ ಪಾರ್ಟ್ ಟೈಮ್ ಕೆಲಸದ ಆಮಿಷವೊಡ್ಡಿ ವ್ಯಕ್ತಿಗೆ 4.87 ಲಕ್ಷ ರೂ. ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಅಲ್ಬಾಡಿಯ ಬರಗುಂಡಿ ನಿವಾಸಿ ಶಶಿಧರ ಅವರು ಮೇ 1 ರಂದು ಫೇಸ್ ಬುಕ್ ನಲ್ಲಿ ಕಂಡುಬಂದ ಪಾರ್ಟ್ ಟೈಮ್ ಜಾಬ್ ನೀಡುವ ಸಂದೇಶವನ್ನು ನಿಜವೆಂದು ನಂಬಿ ಲಾಗಿನ್ ಆಗಿದ್ದರು. ಅದರಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿದಲ್ಲಿ ಕಮೀಶನ್ ಹಣ ನೀಡುವುದಾಗಿ ಸೂಚಿಸಲಾಗಿತ್ತು. ಇದನ್ನು ನಂಬಿದ ಶಶಿಧರ ಅವರು ಟಾಸ್ಕ್ಗಾಗಿ ಹಣ ಹಾಕುವಂತೆ ಟೆಲಿಗ್ರಾಮ್ ಆಪ್ನಲ್ಲಿ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಒಟ್ಟು 4,87,000 ರೂ ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಹಣವನ್ನು ಪಡೆದು ಜಾಬ್ ನೀಡದೆ, ಪಡೆದ ಹಣವನ್ನು ವಾಪಸ್ಸು ನೀಡದೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…