ಉಡುಪಿ: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30) ಬಂಧಿತ ಆರೋಪಿ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು.
ಫೆ.10ರಿಂದ 20ರ ಮಧ್ಯಾವಧಿಯಲ್ಲಿ ಪ್ರಶಾಂತ್ ಶೆಟ್ಟಿಯ ಗಮನಕ್ಕೆ ಬಾರದೇ ಅಪರಿಚಿತರು ಆನ್ಲೈನ್ ಮೂಲಕ ಎರಡು ಖಾತೆಗಳಿಂದ ಹಂತ ಹಂತವಾಗಿ ಒಟ್ಟು 1,56,100ರೂ. ನಗದನ್ನು ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬ್ಬಂದಿ ನಿಲೇಶ್ ತಂಡ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಬಂಧಿಸಿದೆ ಎಂದು ತಿಳಿದುಬಂದಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…