ಉಡುಪಿ,: ಆನ್ಲೈನ್ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.
ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.
ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್ಲೈನ್ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…