ಉಡುಪಿ: ವಾಟ್ಸ್ ಅಫ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್ಲೈನ್ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿವಾಕರ್ ಎಂಬವರ ವಾಟ್ಸ್ ಅಫ್ ನಂಬರ್ ಗೆ ಅಪರಿಚಿತ ವ್ಯಕ್ತಿಗಳು ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ದಾಖಲಾತಿಗಳನ್ನು ವಾಟ್ಸ್ ಅಫ್ ಗೆ ಕಳುಹಿಸಿ ದಿವಾಕರ್ ಅವರು ನಂಬುವಂತೆ ಮಾಡಿ ನಂತರ ಯಾರೋ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿ, ವಿವಿಧ ಇಲಾಖೆಯ ಅಧಿಕಾರಿಗಳೆಂದು ನಂಬಿಸಿ ಬಹುಮಾನದ ಮೊತ್ತಕ್ಕೆ ಡಿಪಾಸಿಟ್ ಹಣವನ್ನು ಕಟ್ಟುವಂತೆ ತಿಳಿಸಿದ್ದಾರೆ.
ಆ ಬಳಿಕ ಎಸ್.ಬಿ.ಐ, ಐಡಿಬಿಐ ಬ್ಯಾಂಕ್ ಗಳ ವಿವಿಧ ಖಾತೆಗಳನ್ನು ನೀಡಿದ್ದು, ಇದನ್ನು ನಂಬಿದ ದಿವಕಾರ್ ಜಲ್ದಿ ಕ್ಯಾಶ್ ನಿಂದ ರೂಪಾಯಿ 1,90,000 ಹಾಗೂ ಐಡಿಐಬಿ ಬ್ಯಾಂಕ್ ನಿಂದ ಉಡುಪಿಯಿಂದ ರೂಪಾಯಿ 3,73,150 ರಂತೆ ಒಟ್ಟು ರೂಪಾಯಿ 5,63,150 ಹಣವನ್ನು ಡಿಪಾಸಿಟ್ ಮಾಡಿರುತ್ತಾರೆ.
ಆದರೆ ಬಳಿಕ ಬಹುಮಾನದ ಹಣವನ್ನು ನೀಡದೆ, ಡಿಪಾಸಿಟ್ ಮಾಡಿಸಿಕೊಂಡ ಹಣವನ್ನು ಕೂಡ ವಾಪಾಸ್ಸು ನೀಡದೆ ಒಟ್ಟು ರೂಪಾಯಿ 5,63,150ಹಣವನ್ನು ಮೋಸ ಮಾಡಿರುವುದಾಗಿ ಸೆನ್ ಅಪರಾಧ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…