ಉಡುಪಿ: ವಾಟ್ಸ್ ಅಫ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್ಲೈನ್ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿವಾಕರ್ ಎಂಬವರ ವಾಟ್ಸ್ ಅಫ್ ನಂಬರ್ ಗೆ ಅಪರಿಚಿತ ವ್ಯಕ್ತಿಗಳು ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ದಾಖಲಾತಿಗಳನ್ನು ವಾಟ್ಸ್ ಅಫ್ ಗೆ ಕಳುಹಿಸಿ ದಿವಾಕರ್ ಅವರು ನಂಬುವಂತೆ ಮಾಡಿ ನಂತರ ಯಾರೋ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿ, ವಿವಿಧ ಇಲಾಖೆಯ ಅಧಿಕಾರಿಗಳೆಂದು ನಂಬಿಸಿ ಬಹುಮಾನದ ಮೊತ್ತಕ್ಕೆ ಡಿಪಾಸಿಟ್ ಹಣವನ್ನು ಕಟ್ಟುವಂತೆ ತಿಳಿಸಿದ್ದಾರೆ.
ಆ ಬಳಿಕ ಎಸ್.ಬಿ.ಐ, ಐಡಿಬಿಐ ಬ್ಯಾಂಕ್ ಗಳ ವಿವಿಧ ಖಾತೆಗಳನ್ನು ನೀಡಿದ್ದು, ಇದನ್ನು ನಂಬಿದ ದಿವಕಾರ್ ಜಲ್ದಿ ಕ್ಯಾಶ್ ನಿಂದ ರೂಪಾಯಿ 1,90,000 ಹಾಗೂ ಐಡಿಐಬಿ ಬ್ಯಾಂಕ್ ನಿಂದ ಉಡುಪಿಯಿಂದ ರೂಪಾಯಿ 3,73,150 ರಂತೆ ಒಟ್ಟು ರೂಪಾಯಿ 5,63,150 ಹಣವನ್ನು ಡಿಪಾಸಿಟ್ ಮಾಡಿರುತ್ತಾರೆ.
ಆದರೆ ಬಳಿಕ ಬಹುಮಾನದ ಹಣವನ್ನು ನೀಡದೆ, ಡಿಪಾಸಿಟ್ ಮಾಡಿಸಿಕೊಂಡ ಹಣವನ್ನು ಕೂಡ ವಾಪಾಸ್ಸು ನೀಡದೆ ಒಟ್ಟು ರೂಪಾಯಿ 5,63,150ಹಣವನ್ನು ಮೋಸ ಮಾಡಿರುವುದಾಗಿ ಸೆನ್ ಅಪರಾಧ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…