ಉಡುಪಿ: ವಾಟ್ಸ್ ಅಫ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್ಲೈನ್ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿವಾಕರ್ ಎಂಬವರ ವಾಟ್ಸ್ ಅಫ್ ನಂಬರ್ ಗೆ ಅಪರಿಚಿತ ವ್ಯಕ್ತಿಗಳು ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ದಾಖಲಾತಿಗಳನ್ನು ವಾಟ್ಸ್ ಅಫ್ ಗೆ ಕಳುಹಿಸಿ ದಿವಾಕರ್ ಅವರು ನಂಬುವಂತೆ ಮಾಡಿ ನಂತರ ಯಾರೋ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿ, ವಿವಿಧ ಇಲಾಖೆಯ ಅಧಿಕಾರಿಗಳೆಂದು ನಂಬಿಸಿ ಬಹುಮಾನದ ಮೊತ್ತಕ್ಕೆ ಡಿಪಾಸಿಟ್ ಹಣವನ್ನು ಕಟ್ಟುವಂತೆ ತಿಳಿಸಿದ್ದಾರೆ.
ಆ ಬಳಿಕ ಎಸ್.ಬಿ.ಐ, ಐಡಿಬಿಐ ಬ್ಯಾಂಕ್ ಗಳ ವಿವಿಧ ಖಾತೆಗಳನ್ನು ನೀಡಿದ್ದು, ಇದನ್ನು ನಂಬಿದ ದಿವಕಾರ್ ಜಲ್ದಿ ಕ್ಯಾಶ್ ನಿಂದ ರೂಪಾಯಿ 1,90,000 ಹಾಗೂ ಐಡಿಐಬಿ ಬ್ಯಾಂಕ್ ನಿಂದ ಉಡುಪಿಯಿಂದ ರೂಪಾಯಿ 3,73,150 ರಂತೆ ಒಟ್ಟು ರೂಪಾಯಿ 5,63,150 ಹಣವನ್ನು ಡಿಪಾಸಿಟ್ ಮಾಡಿರುತ್ತಾರೆ.
ಆದರೆ ಬಳಿಕ ಬಹುಮಾನದ ಹಣವನ್ನು ನೀಡದೆ, ಡಿಪಾಸಿಟ್ ಮಾಡಿಸಿಕೊಂಡ ಹಣವನ್ನು ಕೂಡ ವಾಪಾಸ್ಸು ನೀಡದೆ ಒಟ್ಟು ರೂಪಾಯಿ 5,63,150ಹಣವನ್ನು ಮೋಸ ಮಾಡಿರುವುದಾಗಿ ಸೆನ್ ಅಪರಾಧ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…