Featured

ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ – Vishwanews24

ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ

ಉಡುಪಿ: ಜನರನ್ನು ವಂಚಿಸಲು ಸ್ಕ್ಯಾಮರ್ ಗಳು ಹೊಸ ಹೊಸ ವಿಧಾನವನ್ನು ಹುಡುಕುತ್ತಾ ಇರುತ್ತಾರೆ. ಇವರ ಈ ವಂಚನಾ ಜಾಲದಲ್ಲಿ ಸಿಕ್ಕಿಹಾಕಿಕೊಂಡ್ರೆ ನಿಮಗೆ ಪಂಗನಾಮ ಗ್ಯಾರಂಟಿ. ಇದೀಗ ಆನ್ ಲೈನ್ ಹೆಸರಿನಲ್ಲಿ ಹೊಸತೊಂದು ವಂಚನೆ ನಡೆಯುತ್ತಿದೆ. ಈ ಬಗ್ಗೆ ಜನರು ಜಾಗೃತೆಯಾಗಿರಬೇಕಿದೆ.

ಬ್ಯಾಂಕ್ ಹೆಸರಿನಲ್ಲಿ ಅನೇಕ ವಿಧದಲ್ಲಿ ವಂಚನೆ ಮಾಡೋದು ಎಲ್ಲರಿಗೆ ಗೊತ್ತೇ ಇದೆ. . ಜನರನ್ನು ವಂಚಿಸಲು ಸ್ಕ್ಯಾಮರ್ ಗಳು ಹೊಸ ವಿಧಾನವನ್ನು ಕಂಡುಹುಡುಕುತ್ತಾರೆ.ಆದ್ರೆ ಈ ಬಗ್ಗೆ ಅರಿವಿಲ್ಲದವರು ಇಂತಹ ವಂಚನಾ ಜಾಲದಲ್ಲಿ ಸಿಲುಕಿ ತಮ್ಮ ಹಣ ಕಳೆದುಕೊಳ್ಳುತ್ತಾರೆ. ಇದೀಗ ಸ್ಕ್ಯಾಮರ್ ಗಳು ಹೊಸ ವಿಧಾನ ಕಂಡು ಹುಡುಕಿದ್ದು ಹೆಚ್ಚಿನವರಿಗೆ ರಿಜಿಸ್ಟಾರ್ ಪೋಸ್ಟ್ ಕಳುಹಿಸಿ ವಂಚಿಸಲಾಗುತ್ತಿದೆ.

ಹೌದು, ನಗರ ಭಾಗದಲ್ಲಿ ಬಟ್ಟೆಬರೆಗಳನ್ನು ಆನ್ ಲೈನ್ ಮೂಲಕನೇ ಖರೀದಿಸಲಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ಮಿಶೋ ಹೆಸರಿನ ಬಟ್ಟೆಬರೆಗಳ ಆನ್ ಲೈನ್ ಕಂಪೆನಿಯ ಹೆಸರಿನಲ್ಲಿ ರಿಜಿಸ್ಟಾರ್ ಪೋಸ್ಟ್ ಕಳುಹಿಸುತ್ತಿದ್ದಾರೆ. ಈ ರಿಜಿಸ್ಟಾರ್ ಪೋಸ್ಟ್ ನಲ್ಲಿ ಗಿಫ್ಟ್ ಓಚರೊಂದನ್ನು ಕಳುಹಿಸಿ ನೀವು ಕಂಪೆನಿಯ ವಾರ್ಷಿಕೊತ್ಸವದ ಸಂದರ್ಭದಲ್ಲಿ ಹಮ್ಮಿಕೊಂಡ ಲಕ್ಕಿ ಕೂಪನ್ ನಲ್ಲಿ ಗೆದ್ದಿದ್ದೀರಿ ನಿಮಗೆ ಬಂಪರ್ ಬಹುಮಾನವಾಗಿ ಕಾರು ಸಿಕ್ಕಿದೆ ಅಂತ ನಂಬಿಸುತ್ತಾರೆ.

ನಿಮ್ಮ ಎಕೌಂಟ್ ಗೆ ಹಣ ವರ್ಗಾವಣೆ ಮಾಡುತ್ತೇವೆ ಅದಕ್ಕಾಗಿ ಫಾರ್ಮೊಂದನ್ನು ತುಂಬಿಸಿ ವಾಟ್ಸಾಪ್ ಮಾಡಿ ಎಂದು ಹೇಳುತ್ತಾರೆ. ಬಳಿಕ ಎಲ್ಲಾ ಬ್ಯಾಂಕ್ ಡೀಟೇಲ್ಸ್ ಪಡೆದು ಮುಂಗಡವಾಗಿ ಹಣವನ್ನು ನೀಡಬೇಕು ಎಂದು ನಂಬಿಸಿ ಮೋಸ ಮಾಡುತ್ತಾರೆ. ಇಂತಹ ಮೋಸದ ಜಾಲ ಸದ್ಯ ಸಕ್ರೀಯವಾಗಿದ್ದು ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕಿದೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

8 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

25 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

34 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

50 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago