Featured

ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ – Vishwanews24

ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ

ಉಡುಪಿ: ಜನರನ್ನು ವಂಚಿಸಲು ಸ್ಕ್ಯಾಮರ್ ಗಳು ಹೊಸ ಹೊಸ ವಿಧಾನವನ್ನು ಹುಡುಕುತ್ತಾ ಇರುತ್ತಾರೆ. ಇವರ ಈ ವಂಚನಾ ಜಾಲದಲ್ಲಿ ಸಿಕ್ಕಿಹಾಕಿಕೊಂಡ್ರೆ ನಿಮಗೆ ಪಂಗನಾಮ ಗ್ಯಾರಂಟಿ. ಇದೀಗ ಆನ್ ಲೈನ್ ಹೆಸರಿನಲ್ಲಿ ಹೊಸತೊಂದು ವಂಚನೆ ನಡೆಯುತ್ತಿದೆ. ಈ ಬಗ್ಗೆ ಜನರು ಜಾಗೃತೆಯಾಗಿರಬೇಕಿದೆ.

ಬ್ಯಾಂಕ್ ಹೆಸರಿನಲ್ಲಿ ಅನೇಕ ವಿಧದಲ್ಲಿ ವಂಚನೆ ಮಾಡೋದು ಎಲ್ಲರಿಗೆ ಗೊತ್ತೇ ಇದೆ. . ಜನರನ್ನು ವಂಚಿಸಲು ಸ್ಕ್ಯಾಮರ್ ಗಳು ಹೊಸ ವಿಧಾನವನ್ನು ಕಂಡುಹುಡುಕುತ್ತಾರೆ.ಆದ್ರೆ ಈ ಬಗ್ಗೆ ಅರಿವಿಲ್ಲದವರು ಇಂತಹ ವಂಚನಾ ಜಾಲದಲ್ಲಿ ಸಿಲುಕಿ ತಮ್ಮ ಹಣ ಕಳೆದುಕೊಳ್ಳುತ್ತಾರೆ. ಇದೀಗ ಸ್ಕ್ಯಾಮರ್ ಗಳು ಹೊಸ ವಿಧಾನ ಕಂಡು ಹುಡುಕಿದ್ದು ಹೆಚ್ಚಿನವರಿಗೆ ರಿಜಿಸ್ಟಾರ್ ಪೋಸ್ಟ್ ಕಳುಹಿಸಿ ವಂಚಿಸಲಾಗುತ್ತಿದೆ.

ಹೌದು, ನಗರ ಭಾಗದಲ್ಲಿ ಬಟ್ಟೆಬರೆಗಳನ್ನು ಆನ್ ಲೈನ್ ಮೂಲಕನೇ ಖರೀದಿಸಲಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ಮಿಶೋ ಹೆಸರಿನ ಬಟ್ಟೆಬರೆಗಳ ಆನ್ ಲೈನ್ ಕಂಪೆನಿಯ ಹೆಸರಿನಲ್ಲಿ ರಿಜಿಸ್ಟಾರ್ ಪೋಸ್ಟ್ ಕಳುಹಿಸುತ್ತಿದ್ದಾರೆ. ಈ ರಿಜಿಸ್ಟಾರ್ ಪೋಸ್ಟ್ ನಲ್ಲಿ ಗಿಫ್ಟ್ ಓಚರೊಂದನ್ನು ಕಳುಹಿಸಿ ನೀವು ಕಂಪೆನಿಯ ವಾರ್ಷಿಕೊತ್ಸವದ ಸಂದರ್ಭದಲ್ಲಿ ಹಮ್ಮಿಕೊಂಡ ಲಕ್ಕಿ ಕೂಪನ್ ನಲ್ಲಿ ಗೆದ್ದಿದ್ದೀರಿ ನಿಮಗೆ ಬಂಪರ್ ಬಹುಮಾನವಾಗಿ ಕಾರು ಸಿಕ್ಕಿದೆ ಅಂತ ನಂಬಿಸುತ್ತಾರೆ.

ನಿಮ್ಮ ಎಕೌಂಟ್ ಗೆ ಹಣ ವರ್ಗಾವಣೆ ಮಾಡುತ್ತೇವೆ ಅದಕ್ಕಾಗಿ ಫಾರ್ಮೊಂದನ್ನು ತುಂಬಿಸಿ ವಾಟ್ಸಾಪ್ ಮಾಡಿ ಎಂದು ಹೇಳುತ್ತಾರೆ. ಬಳಿಕ ಎಲ್ಲಾ ಬ್ಯಾಂಕ್ ಡೀಟೇಲ್ಸ್ ಪಡೆದು ಮುಂಗಡವಾಗಿ ಹಣವನ್ನು ನೀಡಬೇಕು ಎಂದು ನಂಬಿಸಿ ಮೋಸ ಮಾಡುತ್ತಾರೆ. ಇಂತಹ ಮೋಸದ ಜಾಲ ಸದ್ಯ ಸಕ್ರೀಯವಾಗಿದ್ದು ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago