ಉಡುಪಿ : ‘ಆಯುಷ್ಮಾನ್ ಭಾರತ್’ ಯೋಜನೆಯಡಿ ನೊಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ. ಸಾರ್ವಜನಿಕರು ‘ಆಯುಷ್ಮಾನ್ ಭಾರತ್’ ಯೋಜನೆಯ ನೊಂದಾಯಿತ ಆಸ್ಪತ್ರೆಗಳಲ್ಲೇ ಕೊರೋನಾ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಇತ್ತೀಚೆಗೆ ಕೊರೋನಾ ವಿಚಾರವಾಗಿ ಆಧಾರ ರಹಿತ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಜನತೆ ವದಂತಿಗಳಿಗೆ ಕಿವಿಗೊಡದೆ ಸರಕಾರದ ಆರೋಗ್ಯ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವುದು ಇಂದಿನ ಅಗತ್ಯತೆಯಾಗಿದೆ ಎಂದರು.
ಪ್ರತೀ ಗ್ರಾ.ಪಂ., ತಾ.ಪಂ., ಜಿ.ಪಂ. ಮಟ್ಟದಲ್ಲಿ ಕಾಲಕಾಲಕ್ಕೆ ಕೊರೋನಾ ಕಾರ್ಯಪಡೆಯ ಸಭೆಗಳನ್ನು ನಡೆಸಿ ಅಗತ್ಯ ತುರ್ತು ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಅವಶ್ಯಕವಾಗಿದೆ. ಕೊರೋನಾ ವಾರಿಯರ್ಸ್ಗಳಿಗೆ ಸಹಕರಿಸುವ ಜೊತೆಗೆ ಸ್ವಯಂ ಜಾಗೃತಿ ಹಾಗೂ ಆರೋಗ್ಯ ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ಕೊರೋನಾ ಸಂಕಷ್ಟದಿಂದ ಪಾರಾಗೋಣ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…