ಉಡುಪಿ: ಅಜೆಕಾರಿನ ದೇಪ್ಪುಟ್ಟೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಿಲೀಪ್ ಹೆಗ್ಡೆಯು ಜೂನ್ ತಿಂಗಳಿನಲ್ಲಿ ಉಡುಪಿ ಗ್ರಾಮಾಂತರದ ಖಾಸಗಿ ಲ್ಯಾಬ್ನಲ್ಲಿ ವಿಷ ಸೇವಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
ಆರೋಪಿಯು ತಾನು ವೈದ್ಯಕೀಯ ವಿದ್ಯಾರ್ಥಿಯಂತೆ ನಟಿಸಿ ತನ್ನ ಲ್ಯಾಬ್ನ ಬಳಕೆಗೆ ಬೇಕೆಂದು ಲ್ಯಾಬ್ನವರನ್ನು ನಂಬಿಸಿ ಆತ “ಆರ್ಸೆನಿಕ್ ಟ್ರೈ ಆಕ್ಸೈಡ್” ಖರೀದಿಸಿದ್ದ. ಈ ಮೂಲಕ ಆರೋಪಿಗಳು ಬಾಲಕೃಷ್ಣ ಪೂಜಾರಿ ಹತ್ಯೆಗೆ ಐದು ತಿಂಗಳ ಹಿಂದೆಯೆ ಯೋಜನೆ ರೂಪಿಸಿದ್ದರು ಎಂಬುದು ತಿಳಿದುಬಂದಿದೆ.
ವಿಷ ಮಾರಾಟ ಮಾಡಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಪೊಲೀಸರು ಲ್ಯಾಬ್ ಮಾಲೀಕರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಒಳಪಡಿಸುವುದಾಗಿ ಉಡುಪಿ ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಮುಂಬೈನಲ್ಲಿ ಬೆಳೆದು ಶಿಕ್ಷಣ ಪಡೆದಿದ್ದ ಆರೋಪಿ ದಿಲೀಪ್ ಹೆಗ್ಡೆ ಅವರು ಸಾಮಾಜಿಕವಾಗಿ ಸಕ್ರಿಯರಾಗಿರಲಿಲ್ಲ. ಬಿಕಾಂ ಪದವಿ ಪಡೆದಿರುವ ಆತ, ಕೆಲವು ವರ್ಷಗಳ ಹಿಂದೆ ಕಾರ್ಕಳದಲ್ಲಿ ಆತನ ಕುಟುಂಬ ಹೊಸ ಉದ್ದಿಮೆ ಆರಂಭಿಸಿದಾಗ ಊರಿಗೆ ಮರಳಿ ಬಂದು ಉದ್ಯಮದಲ್ಲಿ ತೊಡಗಿಕೊಂಡಿದ್ದ.
ಗೂಗಲ್ ಸರ್ಚ್ ಮುಲಕವೇ ಆರ್ಸೆನಿಕ್ ಟ್ರೈ ಆಕ್ಸೈಡ್ ಬಗ್ಗೆ ಆರೋಪಿ ಮಾಹಿತಿ ಪಡೆದಿದ್ದ. ಜೊತೆಗೆ ಸಾಮಾಜಿಕ ಜಾಲತಾಣ, ಸಿನೆಮಾ ಅಥವಾ ಗೆಳೆಯರ ಮೂಲಕ ಈ ವಿಷ ಪದಾರ್ಥದ ಕುರಿತು ಮಾಹಿತಿ ದೊರೆತಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…