ಉಡುಪಿ: ಅಜೆಕಾರಿನ ದೇಪ್ಪುಟ್ಟೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಿಲೀಪ್ ಹೆಗ್ಡೆಯು ಜೂನ್ ತಿಂಗಳಿನಲ್ಲಿ ಉಡುಪಿ ಗ್ರಾಮಾಂತರದ ಖಾಸಗಿ ಲ್ಯಾಬ್ನಲ್ಲಿ ವಿಷ ಸೇವಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
ಆರೋಪಿಯು ತಾನು ವೈದ್ಯಕೀಯ ವಿದ್ಯಾರ್ಥಿಯಂತೆ ನಟಿಸಿ ತನ್ನ ಲ್ಯಾಬ್ನ ಬಳಕೆಗೆ ಬೇಕೆಂದು ಲ್ಯಾಬ್ನವರನ್ನು ನಂಬಿಸಿ ಆತ “ಆರ್ಸೆನಿಕ್ ಟ್ರೈ ಆಕ್ಸೈಡ್” ಖರೀದಿಸಿದ್ದ. ಈ ಮೂಲಕ ಆರೋಪಿಗಳು ಬಾಲಕೃಷ್ಣ ಪೂಜಾರಿ ಹತ್ಯೆಗೆ ಐದು ತಿಂಗಳ ಹಿಂದೆಯೆ ಯೋಜನೆ ರೂಪಿಸಿದ್ದರು ಎಂಬುದು ತಿಳಿದುಬಂದಿದೆ.
ವಿಷ ಮಾರಾಟ ಮಾಡಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಪೊಲೀಸರು ಲ್ಯಾಬ್ ಮಾಲೀಕರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಒಳಪಡಿಸುವುದಾಗಿ ಉಡುಪಿ ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಮುಂಬೈನಲ್ಲಿ ಬೆಳೆದು ಶಿಕ್ಷಣ ಪಡೆದಿದ್ದ ಆರೋಪಿ ದಿಲೀಪ್ ಹೆಗ್ಡೆ ಅವರು ಸಾಮಾಜಿಕವಾಗಿ ಸಕ್ರಿಯರಾಗಿರಲಿಲ್ಲ. ಬಿಕಾಂ ಪದವಿ ಪಡೆದಿರುವ ಆತ, ಕೆಲವು ವರ್ಷಗಳ ಹಿಂದೆ ಕಾರ್ಕಳದಲ್ಲಿ ಆತನ ಕುಟುಂಬ ಹೊಸ ಉದ್ದಿಮೆ ಆರಂಭಿಸಿದಾಗ ಊರಿಗೆ ಮರಳಿ ಬಂದು ಉದ್ಯಮದಲ್ಲಿ ತೊಡಗಿಕೊಂಡಿದ್ದ.
ಗೂಗಲ್ ಸರ್ಚ್ ಮುಲಕವೇ ಆರ್ಸೆನಿಕ್ ಟ್ರೈ ಆಕ್ಸೈಡ್ ಬಗ್ಗೆ ಆರೋಪಿ ಮಾಹಿತಿ ಪಡೆದಿದ್ದ. ಜೊತೆಗೆ ಸಾಮಾಜಿಕ ಜಾಲತಾಣ, ಸಿನೆಮಾ ಅಥವಾ ಗೆಳೆಯರ ಮೂಲಕ ಈ ವಿಷ ಪದಾರ್ಥದ ಕುರಿತು ಮಾಹಿತಿ ದೊರೆತಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…