ಉಡುಪಿ : ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿ ಪ್ರವೀಣ್ ಅರುಣ್ ಚೌಗುಲೆ ಮಹಾರಾಷ್ಟ ಮೂಲದ ಸಾಂಗ್ಲಿಯವರಾಗಿದ್ದು, ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಎರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಹೇಳಿದರು. ಕೊಲೆಗೆ ಕಾರಣ ಏನು ಎಂಬುದನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಗಳಿವೆ.
ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೋಪ್ಪಿಗೆ ಕೊಟ್ಟಿದ್ದಾನೆ. ಆರೋಪಿ ಉದ್ದೇಶ ಅಯ್ನಾಝ್ ಎಂಬಾಕೆಯನ್ನು ಕೊಲೆ ಮಾಡುವುದಾಗಿತ್ತು. ಆದರೆ ಕೊಲೆ ಮಾಡುವ ವೇಳೆ ಮನೆಯವರು ಅಡ್ಡ ಬಂದಿದ್ದಕ್ಕೆ ಅವರನ್ನು ಕೊಲೆ ಮಾಡಿದ್ದಾನೆ. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯ ನಾಶ ಮಾಡುವ ಸಲುವಾಗಿ ಎಲ್ಲರನ್ನೂ ಕೊಲೆ ಮಾಡಿರುವ ಬಗ್ಗೆ ತಪ್ಪೋಪ್ಪಿಗೆ ನೀಡಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ಸದ್ಯ ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್ ಗೆ ಇವತ್ತೇ ಹಾಜರು ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…