ಉಡುಪಿ : ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿ ಪ್ರವೀಣ್ ಅರುಣ್ ಚೌಗುಲೆ ಮಹಾರಾಷ್ಟ ಮೂಲದ ಸಾಂಗ್ಲಿಯವರಾಗಿದ್ದು, ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಎರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಹೇಳಿದರು. ಕೊಲೆಗೆ ಕಾರಣ ಏನು ಎಂಬುದನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಗಳಿವೆ.
ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೋಪ್ಪಿಗೆ ಕೊಟ್ಟಿದ್ದಾನೆ. ಆರೋಪಿ ಉದ್ದೇಶ ಅಯ್ನಾಝ್ ಎಂಬಾಕೆಯನ್ನು ಕೊಲೆ ಮಾಡುವುದಾಗಿತ್ತು. ಆದರೆ ಕೊಲೆ ಮಾಡುವ ವೇಳೆ ಮನೆಯವರು ಅಡ್ಡ ಬಂದಿದ್ದಕ್ಕೆ ಅವರನ್ನು ಕೊಲೆ ಮಾಡಿದ್ದಾನೆ. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯ ನಾಶ ಮಾಡುವ ಸಲುವಾಗಿ ಎಲ್ಲರನ್ನೂ ಕೊಲೆ ಮಾಡಿರುವ ಬಗ್ಗೆ ತಪ್ಪೋಪ್ಪಿಗೆ ನೀಡಿದ್ದಾನೆ ಎಂದು ಹೇಳಿದ್ದಾರೆ.
ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ಸದ್ಯ ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್ ಗೆ ಇವತ್ತೇ ಹಾಜರು ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…