ಉಡುಪಿ, : ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ.
ಮುಸ್ಲಿಂ ವ್ಯಾಪಾರಿಗಳ ಒಂದು ವರ್ಗ, ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿ, ಹೊಟ್ಟೆಯ ಮೇಲೆ ಹೊಡಿಯಬೇಡಿ ಅಂತಾ ಮನವಿ ಮಾಡಿದರೆ, ಇನ್ನೊಂದೆಡೆ ಮುಸ್ಲಿಂ ಮುಖಂಡರು ಮಾತ್ರ ವ್ಯಾಪಾರ ಬಹಿಷ್ಕಾರ ಹಾಕಿದರೆ ಏನೂ ತೊಂದರೆ ಇಲ್ಲ. ಯಾವ ನಷ್ಟವೂ ಆಗುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಉಡುಪಿಯ ಮುಸ್ಲಿಂ ಮುಖಂಡ ಅನ್ವರ್ ಅಲಿ, “ಆರ್ಥಿಕ ಬಹಿಷ್ಕಾರ ಹಾಕಿದರೆ ಮುಸ್ಲಿಂ ವ್ಯಾಪಾರಿಗಳಿಗೆ ಏನೂ ತೊಂದರೆ ಆಗಲ್ಲ. ಯಾರೂ ಒಂದು ದಿನದ ವ್ಯಾಪಾರ ನಂಬಿ ಕೂತಿಲ್ಲ, ಒಂದು ದಿನದ ವ್ಯಾಪಾರದಲ್ಲಿ ಜೀವನ ಹೋಗುವುದಿಲ್ಲ. ಮುಸ್ಲಿಮರು ಹಿಂದೂ ಅಂಗಡಿಗಳಿಗೆ ಹೋಗದಿದ್ದರೆ ಹಿಂದೂಗಳಿಗೇ ಹೆಚ್ಚು ನಷ್ಟ,” ಎಂದು ಅನ್ವರ್ ಅಲಿ ಹೇಳಿದ್ದಾರೆ.
“ಕಾಪು ಮಾರಿಗುಡಿಯಲ್ಲಿ ಸುಗ್ಗಿ ಮಾರಿ ಜಾತ್ರೆ ಈವರೆಗೂ ವಿಜೃಂಭಣೆಯಿಂದ ನಡೆಯುತ್ತಿತ್ತು. ಪ್ರತೀ ವರ್ಷ ನಾವು ವ್ಯಾಪಾರ ನಡೆಸಿಕೊಂಡು ಬರುತ್ತಿದ್ದೆವು. ಈ ಬಾರಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಧಾರ್ಮಿಕ ದತ್ತಿ ಕಾನೂನು ಅಡಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಪ್ರಕಟಣೆ ಹೊರಡಿಸಲಾಗಿದೆ. ಮುಖ್ಯವಾಗಿ ಇದು ಸೌಹಾರ್ದದತೆಗೆ ಧಕ್ಕೆ ಬರುವ ಸಾಧ್ಯತೆ ಇದೆ,” ಎಂದು ಅನ್ವರ್ ಅಲಿ ಹೇಳಿದ್ದಾರೆ.
ದೇಶದೆಲ್ಲೆಡೆ ಈ ಕುರಿತು ಚರ್ಚೆಯಾಗುತ್ತಿದ್ದರೂ ಈ ಭಾಗದ ಮುಸ್ಲಿಂ ಸಂಘಟನೆಗಳು, ಮುಖಂಡರು ಯಾವುದೇ ಪ್ರತಿಕ್ರಿಯ ಈವರೆಗೂ ಕೊಟ್ಟಿಲ್ಲ. ಯಾಕೆಂದರೆ ಇಸ್ಲಾಂನಲ್ಲಿ ಹುಟ್ಟಿಸಿದ ದೇವರು ಹುಲ್ಲು ಮೇಯಿಸದೆ ಇರಲ್ಲ ಎನ್ನುವ ಮಾತಿದೆ. ಹೀಗಾಗಿ ನಾವು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಈ ಭಾಗದ ಹಿಂದೂಗಳೇ ಈ ಬಹಿಷ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಎಂದರು.
ಮುಸ್ಲಿಮರು ನಮ್ಮಲ್ಲಿ ಖರೀದಿಗೆ ಬರುವುದನ್ನು ನಿಲ್ಲಿಸಿದರೆ ಸಮಸ್ಯೆಯಾಗುತ್ತದೆ ಅಂತಾ ಹಿಂದೂ ವ್ಯಾಪಾರಿಗಳೇ ಹೇಳಿದ್ದಾರೆ. ನಮ್ಮಲ್ಲಿ ದೊಡ್ಡ ವ್ಯವಹಾರ ಮಾಡುವವರು ಮುಸ್ಲಿಮರು. ಹೀಗಾಗಿ ಇದು ಹಿಂದೂಗಳಿಗೆ ತಿರುಗುಬಾಣ ಆಗಲಿದೆ ಎನ್ನುವ ಅಭಿಪ್ರಾಯ ಹಿಂದೂ ವರ್ತಕರಿಂದ ಕೇಳಿಬಂದಿದೆ ಎಂದು ಅನ್ವರ್ ಅಲಿ ಹೇಳಿದ್ದಾರೆ.
ಈ ಆರ್ಥಿಕ ಬಹಿಷ್ಕಾರದಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಕಾಪು ಮಾರಿಗುಡಿ ಇಲ್ಲವಾದರೆ ಬೇರೆ ಸ್ಥಳದಲ್ಲಿ ವ್ಯಾಪಾರ ನಡೆಯುತ್ತದೆ. ಒಂದು ದಿನದ ವ್ಯಾಪಾರದಲ್ಲಿ ಜೀವನ ಸಾಗುವುದಿಲ್ಲ. ಅಷ್ಟಕ್ಕೂ ವ್ಯಾಪಾರ ನಿಷೇಧ ಮಾಡಿದರೆ ಸ್ವಂತ ಅಂಗಡಿ ಇಟ್ಟುಕೊಳ್ಳುತ್ತೇವೆ. ಸ್ವಉದ್ಯೋಗ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಈ ಬಹಿಷ್ಕಾರ ಹಿಜಾಬ್ ಬಂದ್ಗೆ ಪ್ರತಿಕಾರನಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅನ್ವರ್ ಅಲಿ, ನ್ಯಾಯಾಲಯ ಹಿಜಾಬ್ ವಿಚಾರವಾಗಿ ನೀಡಿರುವ ತೀರ್ಪಿನ ಬಗ್ಗೆ ಗೌರವವಿದೆ. ಆದರೆ ಕುರಾನ್ನಲ್ಲಿ ಹಿಜಾಬ್ ಕಡ್ಡಾಯ ಅಲ್ಲ ಅನ್ನುವ ಅಭಿಪ್ರಾಯಕ್ಕೆ ಬಂದ್ ಮೂಲಕ ಬೇಸರ ಹೊರಹಾಕಿದ್ದೇವೆ. ನಮ್ಮ ಬೇಸರಕ್ಕೆ ಪ್ರತಿಯಾಗಿ ವ್ಯಾಪಾರಕ್ಕೆ ಅವಕಾಶ ನಿರಾಕರಿಸಿರುವುದು ಸರಿಯಲ್ಲ ಎಂದು ಮುಸ್ಲಿಂ ಮುಖಂಡ ಅನ್ವರ್ ಅಲಿ ಹೇಳಿದ್ದಾರೆ.
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…
ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…