ಉಡುಪಿ : ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಮಟ್ಟಾರ್ ಸಂತಾಪ -Vishwanews24
ಉಡುಪಿ : ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಮಟ್ಟಾರ್ ಸಂತಾಪ -Vishwanews24
ಉಡುಪಿ : ರಾಷ್ಟ್ರೀಯ ನಾಯಕ, ಪ್ರಭಾವಿ ರಾಜಕಾರಣಿಯಾಗಿ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿ ಸುಧೀರ್ಘ ರಾಜಕೀಯ ಜೀವನದಲ್ಲಿ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ, ಕೇಂದ್ರ ಸರ್ಕಾರದ ರಸ್ತೆ ಮತ್ತು ಸಾರಿಗೆ ಸಚಿವರಾಗಿ, ರಾಷ್ಟ್ರೀಯ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಸರಳ ಸಜ್ಜನ ರಾಜಕಾರಣಿಯಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಕಟಪೂರ್ವ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ತೀವ್ರ ಸಂತಾಪ ಸೂಚಿಸಿದರು.
