Featured

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ

ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು, ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿರುವ ಘಟನೆ ಉಡುಪಿಯ ಬಡನಿಡಿಯೂರು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ 69 ವರ್ಷದ ಸರಸು ಸುವರ್ಣ ಅವರು ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಸು ಸುವರ್ಣ ಅವರು ತಮ್ಮ ಎರಡನೇ ಮಗ ವಿನೋದ ಸುವರ್ಣನೊಂದಿಗೆ ಬಡನಿಡಿಯೂರಿನ ಮನೆಯಲ್ಲಿ ವಾಸವಾಗಿದ್ದರು. ಈ ಮನೆಯು ಸರಸು ಅವರ ಹೆಸರಿನಲ್ಲೇ ಇತ್ತು. ವಿನೋದ ಪದೇಪದೇ ಆ ಮನೆಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ತಾಯಿಯನ್ನು ಒತ್ತಾಯಿಸುತ್ತಿದ್ದನು. ತಾಯಿ ಇದಕ್ಕೆ ಒಪ್ಪದಿದ್ದಾಗ, ವಿನೋದ ಆಕೆಯ ಮೇಲೆ ಮತ್ತು ತಂದೆ ದಾಸು ತಿಂಗಳಾಯ ಅವರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ, ವಿನೋದ ಅವರನ್ನು ಬಲವಂತವಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಕರೆದೊಯ್ದು, ಅವರ ಇಚ್ಛೆಗೆ ವಿರುದ್ಧವಾಗಿ 11 ಸೆಂಟ್ಸ್ ಜಮೀನು ಮತ್ತು ಮನೆಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿದ್ದಾನೆ. ಈ ವಿಷಯವನ್ನು ಯಾರಿಗೂ ಹೇಳದಂತೆ ತಾಯಿಯನ್ನು ಬೆದರಿಸಿದ್ದನು ಎಂದು ಆರೋಪಿಸಲಾಗಿದೆ.

ನಂತರ, ಸರಸು ಸುವರ್ಣ ಅವರು ಈ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದನ್ನು ತಿಳಿದ ವಿನೋದ, ಕೋಪಗೊಂಡು ತಾಯಿ ಸರಸು, ತಂದೆ ದಾಸು ಮತ್ತು ಸಹೋದರಿ ವಿನುತಾ ಅವರನ್ನು ಮನೆಯಿಂದ ಹೊರಹಾಕಿದ್ದಾನೆ.

ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago