ಉಡುಪಿ: ಕಳೆದ ಹಲವು ತಿಂಗಳುಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಹಲವಾರು ಬಾರಿ ವ್ಯತ್ಯಯವಾಗಿ ಇ.ಎಸ್.ಐ. ನೋಂದಾಯಿತ ನೌಕರರು ಮತ್ತು ಅವಲಂಬಿತ ಕುಟುಂಬಗಳು ತೊಂದರೆಗೀಡಾಗಿವೆ. ಖಾಸಗಿ ಆಸ್ಪತ್ರೆಗಳೊಂದಿಗಿನ ರಾಜ್ಯ ಸರಕಾರದ ಒಡಂಬಡಿಕೆಯು ನವೀಕರಣಗೊಳ್ಳದೆ ಸದ್ರಿ ಸಮಸ್ಯೆ ರಾಜ್ಯಾದ್ಯಂತ ಉದ್ಭವಿಸಿರುವುದಾಗಿ ಮಾಹಿತಿ ನೀಡಲಾಗಿರುತ್ತದೆ. ಇ.ಎಸ್.ಐ. ಸೌಲಭ್ಯವನ್ನು ನಂಬಿಕೊಂಡ ಬಡ ರೋಗಿಗಳು ಸೌಲಭ್ಯ ನಿರಾಕರಣೆಯಿಂದ ಆಗಾಗ ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಯೋಜನೆಯಡಿ ನಗದು ರಹಿತ ಚಿಕಿತ್ಸೆಯು ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದೆ. ಇ.ಎಸ್.ಐ. ಸೌಲಭ್ಯ ಸಿಗದೆ ಜಿಲ್ಲೆಯ ಅನೇಕ ಕಾರ್ಮಿಕರು, ನೌಕರರು ಹಾಗೂ ಉದ್ಯೋಗಿಗಳು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರು ತೊಂದರೆಗೀಡಾಗಿದ್ದಾರೆ.
ಅರ್ಹ ಕಾರ್ಮಿಕರ ಆರೋಗ್ಯ ರಕ್ಷಣೆ ಸರ್ಕಾರದ ಸಾಮಾಜಿಕ ಜವಾಬ್ದಾರಿಯಾಗಿದೆ. ಬಡ ಕುಟುಂಬಗಳ ಜೀವದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಇ.ಎಸ್.ಐ. ಯೋಜನೆಯು ಯಾವುದೇ ಅಡಚರಣೆಗಳಿಲ್ಲದೆ ನಿರಂತರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಿ ಸದಿ ಸಮಸ್ಯೆಗೆ ಸರಕಾರ ಶೀಘ್ರವಾಗಿ ಖಾಯಂ ಪರಿಹಾರ ಕೈಗೊಳ್ಳುವಂತೆ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…