Featured

ಉಡುಪಿ : ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ : ಸಚಿವೆ ಹೆಬ್ಬಾಳ್ಕರ್ ವಿರುದ್ದ ತನಿಖೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ – vishwanews24

ಉಡುಪಿ : ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ : ಸಚಿವೆ ಹೆಬ್ಬಾಳ್ಕರ್ ವಿರುದ್ದ ತನಿಖೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಉಡುಪಿ: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮದ ಆರೋಪ ಹೊತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಬಡ ಮಕ್ಕಳ ಅಪೌಷ್ಟಿಕತೆಯ ನಿವಾರಣೆ ಸದುದ್ದೇಶದಿಂದ ರಾಜ್ಯದ ಎಲ್ಲಾ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿ ಹಲವಾರು ವರ್ಷಗಳಿಂದ ಜಾರಿ ಮಾಡಿಕೊಂಡು ಬರಲಾಗುತ್ತಿದೆ. ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜನ ಟೆಂಡರ್ ನಲ್ಲಿ ಭ್ರಷ್ಟಾಚಾರ ಎಸೆಗಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರ ಮೇಲೆ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿರುತ್ತದೆ. ದೂರಿನಲ್ಲಿ ಸುಮಾರು 600 ಕೋಟಿ ರೂಪಾಯಿಗಳ ಬೃಹತ್ ಭ್ರಷ್ಟಾಚಾರದ ಆರೋಪ ದಾಖಲಾಗಿರುತ್ತದೆ. ಈ ಹಿಂದೆ ಸರಕಾರದಿಂದ ಕಪ್ಪು ಪಟ್ಟಿಗೆ ಸೇರಿಸಲ್ಪಟ್ಟ ಸಂಸ್ಥೆಯೊಂದರ ಕೃಪಾಪೋಷಿತ ಸ್ವ ಸಹಾಯ ಸಂಘಗಳಿಗೆ ಅಕ್ರಮವಾಗಿ ಟೆಂಡರ್ ಅಂತಿಮಗೊಳಿಸಿದ ಆರೋಪ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರದ ಸರಬರಾಜಿನಲ್ಲಿ ಭ್ರಷ್ಟಾಚಾರವೆಸಗಿದ ಗಂಭೀರ ಆರೋಪ ಲಕ್ಷ್ಮಿ ಹೆಬ್ಬಾಳ್ಕರ್ ರವರ ಮೇಲೆ ಕೇಳಿಬಂದಿದ್ದು ಈ ಬಗ್ಗೆ ಸರಕಾರದಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಪದಾಧಿಕಾರಿಗಳಾದ ಗೀತಾಂಜಲಿ ಸುವರ್ಣ, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಮಾಯಾ ಕಾಮತ್, ಸುಜಲ ಸತೀಶ್, ಅಶ್ವಿನಿ ಶೆಟ್ಟಿ, ಸುಧಾ ಪೈ, ಸುಗುಣ, ಸುಜಾತ, ಚಂದ್ರಿಕಾ, ಸುಮಾ, ನೀರಜ ಶೆಟ್ಟಿ, ಲಕ್ಷ್ಮೀ ಹೆಬ್ಬಾರ್, ಶ್ರೀ ದೇವಿ, ರಾಧಿಕಾ, ಜ್ಯೋತಿ, ಪ್ರತಿಮಾ ನಾಯಕ್, ಆಶಾ ಹೆಗಡೆ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago