ಉಡುಪಿ: ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆ.16, ಸೋಮವಾರ ಉಡುಪಿ ಪುರಭವನದಲ್ಲಿ ನಡೆಯಲಿದೆ.
ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರನ್ನು ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಸ್ವಾಗತಿಸಿ, ಕಾಪು ಮೂಲಕ ಬರಮಾಡಿ ಕೊಳ್ಳಲಾಗುವುದು.
ಸಚಿವರು ಮಧ್ಯಾಹ್ನ ಗಂಟೆ 1.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠವನ್ನು ಸಂದರ್ಶಿಸಿ, 2.00 ಗಂಟೆಗೆ ಸ್ವಾಮೀಜಿಯವರ ದರ್ಶನಗೈದು, 2.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ. ಮಧ್ಯಾಹ್ನ 3.00 ಗಂಟೆಗೆ ಪೆರ್ಡೂರಿನಲ್ಲಿ ಮತ್ತು 3.30ಕ್ಕೆ ಹೆಬ್ರಿಯಲ್ಲಿ ಕೇಂದ್ರ ಸಚಿವರನ್ನು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಸಂಜೆ 5.00ಕ್ಕೆ ಸಚಿವರು ಶ್ರೀ ಶೃಂಗೇರಿ ಮಠವನ್ನು ಸಂದರ್ಶಿಸಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…