ಉಡುಪಿ: ಕಿನ್ನಿಮೂಲ್ಕಿಯ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ 20ನೇ ವರ್ಷದ ಗಣೇಶೋತ್ಸವವನ್ನು ಆ.25ರಿಂದ ಸೆ.7ರ ವರೆಗೆ 14 ದಿನಗಳ ಕಾಲ ಅತ್ಯಂತ ವೈವಿಧ್ಯಮಯ ಮತ್ತು ವೈಭವದಿಂದ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅ.25ರಂದು ಸಂಜೆ ಜೋಡುಕಟ್ಟೆಯಿಂದ ಗಣಪತಿ ಮೈದಾನದ ವರೆಗೆ ಭಕ್ತರ ಭವ್ಯ ಮೆರವಣಿಗೆಯೊಂದಿಗೆ ಈ ಬಾರಿ ಗಣೇಶೋತ್ಸವ ಆರಂಭವಾಗಲಿದೆ. ಗಣೇಶೋತ್ಸವವನ್ನು ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ನಾಡೋಜಿ ಜಿ.ಶಂಕರ್ ಸಭಾಧ್ಯಕ್ಷತೆ ವಹಿಸಲಿದ್ದು, ಸ್ವೀಕರ್ ಯು.ಟಿ.ಖಾದರ್ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ. ವಿ.ಪ. ಸದಸ್ಯರಾದ ಐವನ್ ಡಿಸೋಜ ಉಗ್ರಾಣ ಮುಹೂರ್ತ, ಮಂಜುನಾಥ ಭಂಡಾರಿ ಧ್ವಜಾರೋಹಣ, ಮಾಜಿ ಸಚಿವ ವಿನಯಕುಮಾರ್ ಸೊರಕೆ ವಿದ್ಯುದ್ದೀಪ ಅಲಂಕಾರ ಅನಾವರಣಗೊಳಿಸಲಿದ್ದಾರೆ. ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಆ.26ರಂದು ಧಾರ್ಮಿಕ ಸಭೆಯನ್ನು ಅದಮಾರು ಶ್ರೀ ವಿಶ್ವಪ್ರಿಯ ತೀರ್ಥರು ಉದ್ಘಾಟಿಸಲಿದ್ದಾರೆ. ಶಾಸಕ ಯತ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಆ.27 ರಂದು ಗಣೇಶನ ವಿಗ್ರಹ ಸ್ಥಾಪನೆ, ಪ್ರಾಣಪ್ರತಿಷ್ಠೆ, ಆ.28 ರಂದು 108 ಕಾಯಿ ಗಣಯಾಗ, ಆ.29ರಂದು ಲಕ್ಷ್ಮೀ ಗಣಪತಿ ಹೋಮ, ಆ.30ರಂದು ಸಹಸ್ರಮೋದಕ ಗಣಯಾಗ, ಆ.31ರಂದು ಪ್ರಸನ್ನಗಣಪತಿ ಹೋಮ, ಸೆ.1ರಂದು ಬಾಲಗಣಪತಿ ಹೋಮ, ಸೆ.2ರಂದು 1008 ಕಾಯಿ ಗಣಯಾಗ, ಸೆ.3ರಂದು ಏಕಾದಶಿ, ಸೆ.4ರಂದು 108 ಕಾಯಿ ಗಣಯಾಗ, ಸೆ.5ರಂದು ಹರಿದ್ರಾಗಣಪತಿ ಯಾಗ ನಡೆಯಲಿವೆ. ಸೆ.6ರಂದು ಅಥರ್ವಶೀರ್ಷ ಗಣಯಾಗ, ಸಂಜೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಲಿವೆ ಎಂದು ತಿಳಿಸಿದರು.
ಸೆ.7ರಂದು ಋಣಮೋಚನಾ ಹೋಮ, ಸಂಜೆ 7 ಗಂಟೆಗೆ ಗಣಪತಿ ವಿಸರ್ಜನ ಮೆರವಣಿಗೆ ನಡೆಯಲಿದೆ. ಈ ವೈಭವದ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ಟ್ಯಾಬ್ಲೊಗಳು, ವಾದ್ಯ ವೈವಿಧ್ಯಗಳು ಮತ್ತು ಸಹಸ್ರಾರು ಭಕ್ತರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಶೇರಿಗಾರ್ ಕನ್ನರ್ಪಾಡಿ, ಕಾರ್ಯದರ್ಶಿಗಳಾದ ನವೀನ್ ಶೆಟ್ಟಿ ಒಡ್ಡಾಡಿ, ರವೀಂದ್ರ ಶೆಟ್ಟಿ ಬಾಣಬೆಟ್ಟು ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ಕಿನ್ನಿಮುಲ್ಕಿ ಉಪಸ್ಥಿತರಿದ್ದರು.
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…