ಉಡುಪಿ : ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ – Vishwanews24
ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ
ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ ಕಾರ್ಯಕ್ರಮ ಇದೇ ಆ.27ರಂದು ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಹೇಳಿದರು.
ಉಡುಪಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬೈಲಹೊಂಗಲದ ದುರ್ಗಾದೇವಿ ದೇವಸ್ಥಾನದ ಧರ್ಮದರ್ಶಿ ಮಹಾಂತಯ್ಯ ಸ್ವಾಮಿ ಆಶೀರ್ವಚನ ನೀಡಲಿದ್ದಾರೆ.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿರುವರು ಎಂದರು.
ಡಿಕೆಶಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್ – Vishwanews24
ಸಮಾಜ ಸೇವಕ ಆಪತ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ್ 2023 ರ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದರು.
ಬನ್ನಂಜೆ ನಾರಾಯಣಗುರು ಮಂದಿರದಿಂದ ರಥಬೀದಿಯ ಕನಕ ಗೋಪುರದವರೆಗೆ ಕುಂಭ ಮೆರವಣಿಗೆ ನಡೆಯಲಿದೆ ಎಂದರು.
ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೂಬಿಕ್ಸ್ ಕ್ಯೂಬ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರವನ್ನು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಿನ್ನಿಸ್ ರೆಕಾರ್ಡ್ ದಾಖಲೆಯ ಪ್ರಥ್ವಿಶ್ ಕೆ.ಭಟ್ ಇವರು ರಚಿಸಲಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ್ ಕೊಡವೂರು, ಗೌರವ ಸಲಹೆಗಾರ ಕೃಷ್ಣ ಶೆಟ್ಟಿಬೆಟ್ಟು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್, ಕಾರ್ಯದರ್ಶಿ ವಿಠ್ಠಲ್ ಗೌಡರ್, ಕೋಶಾಧಿಕಾರಿ ಪಂಪೇಶ್ ಮೊದಲಾದವರು ಉಪಸ್ಥಿತರಿದ್ದರು.
ಡಿಕೆಶಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್ – Vishwanews24
