Featured

ಉಡುಪಿ : ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ – Vishwanews24

ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ ಕಾರ್ಯಕ್ರಮ ಇದೇ ಆ.27ರಂದು‌ ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಹೇಳಿದರು.

ಉಡುಪಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬೈಲಹೊಂಗಲದ ದುರ್ಗಾದೇವಿ ದೇವಸ್ಥಾನದ ಧರ್ಮದರ್ಶಿ ಮಹಾಂತಯ್ಯ ಸ್ವಾಮಿ ಆಶೀರ್ವಚನ ನೀಡಲಿದ್ದಾರೆ.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿರುವರು ಎಂದರು.

ಸಮಾಜ ಸೇವಕ ಆಪತ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ್ 2023 ರ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದರು.

ಬನ್ನಂಜೆ ನಾರಾಯಣಗುರು ಮಂದಿರದಿಂದ ರಥಬೀದಿಯ ಕನಕ ಗೋಪುರದವರೆಗೆ ಕುಂಭ ಮೆರವಣಿಗೆ ನಡೆಯಲಿದೆ ಎಂದರು.

ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೂಬಿಕ್ಸ್ ಕ್ಯೂಬ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರವನ್ನು ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಿನ್ನಿಸ್ ರೆಕಾರ್ಡ್ ದಾಖಲೆಯ ಪ್ರಥ್ವಿಶ್ ಕೆ.ಭಟ್ ಇವರು ರಚಿಸಲಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ್ ಕೊಡವೂರು, ಗೌರವ ಸಲಹೆಗಾರ ಕೃಷ್ಣ ಶೆಟ್ಟಿಬೆಟ್ಟು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್, ಕಾರ್ಯದರ್ಶಿ ವಿಠ್ಠಲ್ ಗೌಡರ್, ಕೋಶಾಧಿಕಾರಿ ಪಂಪೇಶ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

18 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

18 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

19 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago