ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಅಧ್ಯಕ್ಷ ಶಶಿಧರ ಎಂ ಅಮೀನ್ ವಡಭಾಂಡೇಶ್ವರ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಲಿದ್ದಾರೆ.
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…
ಕರ್ನಾಟಕದಲ್ಲಿ 1 ವರ್ಷ ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿ…