Featured

ಉಡುಪಿ: ಇಂಜಿನ್ ಕೆಟ್ಟು ಸಮುದ್ರದಲ್ಲೇ ಸಿಲುಕಿಕೊಂಡ 2 ದೋಣಿಗಳು : ಮೂವರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ.

ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ ದೋಣಿಯು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ್ಟಿದ್ದು, ಕೋಡಿಬೆಂಗ್ರೆಯ ಸುಮಾರು 12 ನಾಟಿಕಲ್ ಮೈಲಿ ದೂರದಲ್ಲಿ ತಾಂತ್ರಿಕ ದೋಷದಿಂದಾಗಿ ದೋಣಿಯು ಅಲ್ಲೇ ನಿಂತುಕೊಂಡಿದೆ. ಸಮುದ್ರದಲ್ಲಿನ ಭಾರೀ ಗಾಳಿಮಳೆಯ ಪರಿಣಾಮ ಕೆಟ್ಟು ನಿಂತ ದೋಣಿಯು ಏಳು ಮೈಲಿ ದೂರದವರೆಗೆ ದಡಕ್ಕೆ ಬಂದು ಕಲ್ಲಿಗೆ ಬಡಿದಿದೆ. ಈ ವೇಳೆ ದೋಣಿಯೊಳಗೆ ನೀರು ನುಗ್ಗಿ ನೋಡ ನೋಡುತ್ತಿದ್ದಂತೆ ಮುಳುಗುಡೆಯಾಗಿದೆ.

ದೋಣಿಯಲ್ಲಿದ್ದ ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ಭವ್ಯತ ಮತ್ತು ಲಕ್ಷ್ಮೀ ಪಂಡರಿ ಎಂಬ ಹೆಸರಿನ ದೋಣಿಯ ಮೀನುಗಾರರು ರಕ್ಷಿಸಿದ್ದಾರೆ. ನಂತರ ಮುಳುಗಡೆಯಾಗುತ್ತಿದ್ದ ದೋಣಿಯನ್ನು ಇತರೆ ದೋಣಿಗಳ ಸಹಾಯದಿಂದ ಹಗ್ಗ ಕಟ್ಟಿ ದಡಕ್ಕೆ ಎಳೆದು ತರಲಾಗಿದೆ. ಈ ಅವಘಡದಿಂದಾಗಿ ಸುಮಾರು 9 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದಲ್ಲದೇ ಎರಡು ದಿನಗಳ ಹಿಂದೆ ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ವಿಶ್ವಾಸ್ ಎಂಬ ದೋಣಿ ಸುರತ್ಕಲ್ ಸಮೀಪದ 35 ನಾಟಿಕಲ್ ಹಾಗೂ ಲಕ್ಷ್ಮೀ ಜನಾರ್ದನ್ ಎಂಬ ದೋಣಿಯು ಭಟ್ಕಳ ಸಮೀಪದ 40 ನಾಟಿಕಲ್ ದೂರದ ಸಮುದ್ರದಲ್ಲಿ ಇಂಜಿನ್ ಸಮಸ್ಯೆ ಯಿಂದ ಕೆಟ್ಟು ನಿಂತಿರುವ ಬಗ್ಗೆ ವರದಿಯಾಗಿದೆ. ವಿಶ್ವಾಸ್ ಬೋಟಿನಲ್ಲಿ ಒಟ್ಟು 9 ಮಂದಿ ಮತ್ತು ಲಕ್ಷ್ಮೀ ಜನಾರ್ದನ್ ಬೋಟಿನಲ್ಲಿ ಎಂಟು ಮಂದಿ ಮೀನುಗಾರರಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ದೋಣಿಯವರು ಹಾಗೂ ಮಲ್ಪೆ ಮೀನುಗಾರರ ಸಂಘದವರು ಈಗಾಗಲೇ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ಭಾರೀ ಮಳೆಯಿಂದ ಕಡಲ ಅಬ್ಬರ ತೀವ್ರಗೊಂಡಿರುವುದರಿಂದ ಈ ದೋಣಿಗಳ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಬೋಟಿನಲ್ಲಿರುವ ಮೀನುಗಾರರು ಇದೀಗ ಸಂರ್ಪಕದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

ಈಗಾಗಲೇ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿರುವ ದೋಣಿಗಳಲ್ಲಿರುವ ಮೀನುಗಾರರ ಸಂಪರ್ಕ ಮಾಡಿದ್ದು, ಕೆಟ್ಟು ನಿಂತಿರುವ ದೋಣಿಗಳಲ್ಲಿರುವ ಮೀನುಗಾರರನ್ನು ರಕ್ಷಿಸುವಂತೆ ಹೇಳಿದ್ದೇವೆ. ಅಲ್ಲದೇ ಸಮುದ್ರದಲ್ಲಿ ಸಾಕಷ್ಟು ಏರಿಳೀತ ಕಂಡುಬರುತ್ತಿರುವುದರಿಂದ ಯಾರಿಗೂ ಸಮುದ್ರಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಯಾರು ಕೂಡ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಸೂಚನೆಯನ್ನು ನೀಡಲಾಗುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago