Featured

ಉಡುಪಿ: ಇಂಜಿನ್ ಕೆಟ್ಟು ಸಮುದ್ರದಲ್ಲೇ ಸಿಲುಕಿಕೊಂಡ 2 ದೋಣಿಗಳು : ಮೂವರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ.

ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ ದೋಣಿಯು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ್ಟಿದ್ದು, ಕೋಡಿಬೆಂಗ್ರೆಯ ಸುಮಾರು 12 ನಾಟಿಕಲ್ ಮೈಲಿ ದೂರದಲ್ಲಿ ತಾಂತ್ರಿಕ ದೋಷದಿಂದಾಗಿ ದೋಣಿಯು ಅಲ್ಲೇ ನಿಂತುಕೊಂಡಿದೆ. ಸಮುದ್ರದಲ್ಲಿನ ಭಾರೀ ಗಾಳಿಮಳೆಯ ಪರಿಣಾಮ ಕೆಟ್ಟು ನಿಂತ ದೋಣಿಯು ಏಳು ಮೈಲಿ ದೂರದವರೆಗೆ ದಡಕ್ಕೆ ಬಂದು ಕಲ್ಲಿಗೆ ಬಡಿದಿದೆ. ಈ ವೇಳೆ ದೋಣಿಯೊಳಗೆ ನೀರು ನುಗ್ಗಿ ನೋಡ ನೋಡುತ್ತಿದ್ದಂತೆ ಮುಳುಗುಡೆಯಾಗಿದೆ.

ದೋಣಿಯಲ್ಲಿದ್ದ ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ಭವ್ಯತ ಮತ್ತು ಲಕ್ಷ್ಮೀ ಪಂಡರಿ ಎಂಬ ಹೆಸರಿನ ದೋಣಿಯ ಮೀನುಗಾರರು ರಕ್ಷಿಸಿದ್ದಾರೆ. ನಂತರ ಮುಳುಗಡೆಯಾಗುತ್ತಿದ್ದ ದೋಣಿಯನ್ನು ಇತರೆ ದೋಣಿಗಳ ಸಹಾಯದಿಂದ ಹಗ್ಗ ಕಟ್ಟಿ ದಡಕ್ಕೆ ಎಳೆದು ತರಲಾಗಿದೆ. ಈ ಅವಘಡದಿಂದಾಗಿ ಸುಮಾರು 9 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದಲ್ಲದೇ ಎರಡು ದಿನಗಳ ಹಿಂದೆ ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ವಿಶ್ವಾಸ್ ಎಂಬ ದೋಣಿ ಸುರತ್ಕಲ್ ಸಮೀಪದ 35 ನಾಟಿಕಲ್ ಹಾಗೂ ಲಕ್ಷ್ಮೀ ಜನಾರ್ದನ್ ಎಂಬ ದೋಣಿಯು ಭಟ್ಕಳ ಸಮೀಪದ 40 ನಾಟಿಕಲ್ ದೂರದ ಸಮುದ್ರದಲ್ಲಿ ಇಂಜಿನ್ ಸಮಸ್ಯೆ ಯಿಂದ ಕೆಟ್ಟು ನಿಂತಿರುವ ಬಗ್ಗೆ ವರದಿಯಾಗಿದೆ. ವಿಶ್ವಾಸ್ ಬೋಟಿನಲ್ಲಿ ಒಟ್ಟು 9 ಮಂದಿ ಮತ್ತು ಲಕ್ಷ್ಮೀ ಜನಾರ್ದನ್ ಬೋಟಿನಲ್ಲಿ ಎಂಟು ಮಂದಿ ಮೀನುಗಾರರಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ದೋಣಿಯವರು ಹಾಗೂ ಮಲ್ಪೆ ಮೀನುಗಾರರ ಸಂಘದವರು ಈಗಾಗಲೇ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ಭಾರೀ ಮಳೆಯಿಂದ ಕಡಲ ಅಬ್ಬರ ತೀವ್ರಗೊಂಡಿರುವುದರಿಂದ ಈ ದೋಣಿಗಳ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಬೋಟಿನಲ್ಲಿರುವ ಮೀನುಗಾರರು ಇದೀಗ ಸಂರ್ಪಕದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

ಈಗಾಗಲೇ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿರುವ ದೋಣಿಗಳಲ್ಲಿರುವ ಮೀನುಗಾರರ ಸಂಪರ್ಕ ಮಾಡಿದ್ದು, ಕೆಟ್ಟು ನಿಂತಿರುವ ದೋಣಿಗಳಲ್ಲಿರುವ ಮೀನುಗಾರರನ್ನು ರಕ್ಷಿಸುವಂತೆ ಹೇಳಿದ್ದೇವೆ. ಅಲ್ಲದೇ ಸಮುದ್ರದಲ್ಲಿ ಸಾಕಷ್ಟು ಏರಿಳೀತ ಕಂಡುಬರುತ್ತಿರುವುದರಿಂದ ಯಾರಿಗೂ ಸಮುದ್ರಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಯಾರು ಕೂಡ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಸೂಚನೆಯನ್ನು ನೀಡಲಾಗುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

17 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

18 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 hours ago