Featured

ಉಡುಪಿ: ಇಂಜಿನ್ ಕೆಟ್ಟು ಸಮುದ್ರದಲ್ಲೇ ಸಿಲುಕಿಕೊಂಡ 2 ದೋಣಿಗಳು : ಮೂವರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ.

ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ ದೋಣಿಯು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ್ಟಿದ್ದು, ಕೋಡಿಬೆಂಗ್ರೆಯ ಸುಮಾರು 12 ನಾಟಿಕಲ್ ಮೈಲಿ ದೂರದಲ್ಲಿ ತಾಂತ್ರಿಕ ದೋಷದಿಂದಾಗಿ ದೋಣಿಯು ಅಲ್ಲೇ ನಿಂತುಕೊಂಡಿದೆ. ಸಮುದ್ರದಲ್ಲಿನ ಭಾರೀ ಗಾಳಿಮಳೆಯ ಪರಿಣಾಮ ಕೆಟ್ಟು ನಿಂತ ದೋಣಿಯು ಏಳು ಮೈಲಿ ದೂರದವರೆಗೆ ದಡಕ್ಕೆ ಬಂದು ಕಲ್ಲಿಗೆ ಬಡಿದಿದೆ. ಈ ವೇಳೆ ದೋಣಿಯೊಳಗೆ ನೀರು ನುಗ್ಗಿ ನೋಡ ನೋಡುತ್ತಿದ್ದಂತೆ ಮುಳುಗುಡೆಯಾಗಿದೆ.

ದೋಣಿಯಲ್ಲಿದ್ದ ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ಭವ್ಯತ ಮತ್ತು ಲಕ್ಷ್ಮೀ ಪಂಡರಿ ಎಂಬ ಹೆಸರಿನ ದೋಣಿಯ ಮೀನುಗಾರರು ರಕ್ಷಿಸಿದ್ದಾರೆ. ನಂತರ ಮುಳುಗಡೆಯಾಗುತ್ತಿದ್ದ ದೋಣಿಯನ್ನು ಇತರೆ ದೋಣಿಗಳ ಸಹಾಯದಿಂದ ಹಗ್ಗ ಕಟ್ಟಿ ದಡಕ್ಕೆ ಎಳೆದು ತರಲಾಗಿದೆ. ಈ ಅವಘಡದಿಂದಾಗಿ ಸುಮಾರು 9 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದಲ್ಲದೇ ಎರಡು ದಿನಗಳ ಹಿಂದೆ ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ವಿಶ್ವಾಸ್ ಎಂಬ ದೋಣಿ ಸುರತ್ಕಲ್ ಸಮೀಪದ 35 ನಾಟಿಕಲ್ ಹಾಗೂ ಲಕ್ಷ್ಮೀ ಜನಾರ್ದನ್ ಎಂಬ ದೋಣಿಯು ಭಟ್ಕಳ ಸಮೀಪದ 40 ನಾಟಿಕಲ್ ದೂರದ ಸಮುದ್ರದಲ್ಲಿ ಇಂಜಿನ್ ಸಮಸ್ಯೆ ಯಿಂದ ಕೆಟ್ಟು ನಿಂತಿರುವ ಬಗ್ಗೆ ವರದಿಯಾಗಿದೆ. ವಿಶ್ವಾಸ್ ಬೋಟಿನಲ್ಲಿ ಒಟ್ಟು 9 ಮಂದಿ ಮತ್ತು ಲಕ್ಷ್ಮೀ ಜನಾರ್ದನ್ ಬೋಟಿನಲ್ಲಿ ಎಂಟು ಮಂದಿ ಮೀನುಗಾರರಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ದೋಣಿಯವರು ಹಾಗೂ ಮಲ್ಪೆ ಮೀನುಗಾರರ ಸಂಘದವರು ಈಗಾಗಲೇ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ಭಾರೀ ಮಳೆಯಿಂದ ಕಡಲ ಅಬ್ಬರ ತೀವ್ರಗೊಂಡಿರುವುದರಿಂದ ಈ ದೋಣಿಗಳ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಬೋಟಿನಲ್ಲಿರುವ ಮೀನುಗಾರರು ಇದೀಗ ಸಂರ್ಪಕದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

ಈಗಾಗಲೇ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿರುವ ದೋಣಿಗಳಲ್ಲಿರುವ ಮೀನುಗಾರರ ಸಂಪರ್ಕ ಮಾಡಿದ್ದು, ಕೆಟ್ಟು ನಿಂತಿರುವ ದೋಣಿಗಳಲ್ಲಿರುವ ಮೀನುಗಾರರನ್ನು ರಕ್ಷಿಸುವಂತೆ ಹೇಳಿದ್ದೇವೆ. ಅಲ್ಲದೇ ಸಮುದ್ರದಲ್ಲಿ ಸಾಕಷ್ಟು ಏರಿಳೀತ ಕಂಡುಬರುತ್ತಿರುವುದರಿಂದ ಯಾರಿಗೂ ಸಮುದ್ರಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಯಾರು ಕೂಡ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಸೂಚನೆಯನ್ನು ನೀಡಲಾಗುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

4 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

4 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

4 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

7 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

7 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

7 hours ago