Featured

ಉಡುಪಿ : ಇಂಟರ್ವೆಲ್ ನಲ್ಲಿ ನವವಿವಾಹಿತೆ ನಾಪತ್ತೆ ಪ್ರಕರಣ : ಪ್ರಿಯಕರನೊಂದಿಗೆ ಗೋವಾದಲ್ಲಿ ಪತ್ತೆ

ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರಕ್ಕೆ ಶುಕ್ರವಾರ ಸಾಯಂಕಾಲ ಪತಿ ಜತೆ ಸಿನಿಮಾ ವೀಕ್ಷಣೆಗೆ ತೆರಳಿದ್ದ ಸಂದರ್ಭ ಇಂಟರ್ವೆಲ್ ಬಳಿಕ ನಾಪತ್ತೆಯಾಗಿದ್ದ ನವವಿವಾಹಿತೆ ಜೆನ್ ಡಿ.ಕ್ರೂಸ್(28) ಗೋವಾದಲ್ಲಿ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ.

ಜೆನ್ ಅವರ ಮೊಬೈಲ್ ಲೊಕೇಶನ್ ಗೋವಾದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಮಣಿಪಾಲ ಪೊಲೀಸರ ತಂಡ ಗೋವಾಕ್ಕೆ ತೆರಳಿ ತನಿಖೆ ನಡೆಸಿತ್ತು. ಜೆನ್ ಅವರನ್ನು ಪ್ರಿಯಕರ, ಪಶ್ಚಿಮ ಬಂಗಾಳ ನಿವಾಸಿ ತನ್ಮಯ್ನಾಥ್(25) ಎಂಬಾತನೊಂದಿಗೆ ಗೋವಾ ಪಣಜಿಯ ಐಲ್ಯಾಂಡ್ ಒಂದರಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಇಂಟರ್ವೆಲ್ ನಲ್ಲಿ ವಾಷ್ ರೂಂ ಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಜೆನ್.ಡಿ ಕ್ರೂಸ್ ಬಳಿಕ ನಾಪತ್ತೆಯಾಗಿದ್ದರು. ಅಂದು ಸಾಯಂಕಾಲ ಅವರು ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ತೆರಳಿ ಎಟಿಂ ನಲ್ಲಿ ೩೦ ಸಾವಿರ ರೂ. ಹಣ ತೆಗೆದುಕೊಂಡು ರೈಲಿನಲ್ಲಿ ಗೋವಾಕ್ಕೆ ಪ್ರಯಾಣ ಬೆಳೆಸಿದ್ದರು.

ಜೆನ್ ಪ್ರಿಯಕರ ತನ್ಮಯ್ನಾಥ್ ಧಾರಾವಾಹಿಗಳ ಕ್ಯಾಮರಾಮನ್ ಆಗಿ ಕೆಲಸ ಮಾಡುತಿದ್ದು, ಐದು ವರ್ಷದ ಹಿಂದೆ ಮಂಗಳೂರಿನಲ್ಲಿ ಜೆನ್‌ಗೆ ಪರಿಚಯವಾಗಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರಿಗೆ ಹೆದರಿ ಪ್ರೀತಿ ವಿಚಾರ ಮುಚ್ಚಿಟ್ಟಿದ್ದರು ಎನ್ನಲಾಗಿದೆ.

ಜೆನ್ ಮೂಲತಃ ಮೂಡುಬಿದಿರೆ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಕಟಪಾಡಿ ನಿವಾಸಿ ಲಾಯ್ಡ ಮೊಂತೆರೊ ಅವರನ್ನು ಡಿ.31ರಂದು ವಿವಾಹವಾಗಿದ್ದರು. ಇದೀಗ ಪೊಲೀಸರು ಪ್ರೇಮಿಗಳನ್ನು ಮಣಿಪಾಲ ಠಾಣೆಗೆ ಕರೆತರುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago