Featured

ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು ಮತ್ತು ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆ – Vishwanews24

ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆ

ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ. ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಮೂಲಕ ತಿಳಿಸಿದ್ದಾರೆ ಹಾಗೂ ಈ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ.

ದಿವಾಕರ ಬಿ ಶೆಟ್ಟಿ ಕಳತ್ತೂರು ಇವರು ಕಳೆದ 30 ವರ್ಷಗಳಿಂದ ಕಾಪು ಕಳತ್ತೂರು ಪರಿಸರದಲ್ಲಿ 1000 ಕ್ಕೂ ಮಿಕ್ಕಿ ಸರಕಾರಿ ಸೌಲಭ್ಯ ಜನರಿಗೆ ತಲುಪುವ ಹಾಗೆ ವ್ಯವಸ್ಥೆ ಮಾಡಿದ್ದಾರೆ ಅದಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನ,ವಿದ್ಯಾಬ್ಯಾಸಕ್ಕೆ ಸಹಾಯ ಮಾಡಿದ್ದಾರೆ ವಿವಿಧ ಸಂಘಟನೆಯಿಂದ ಬಡ ಜನರಿಗೆ ಮನೆ ಕಟ್ಟುವಲ್ಲಿ ಸಹಾಯ ಮಾಡಿರುತ್ತಾರೆ ಬಡವರ ಕಷ್ಟ ದಲ್ಲಿ ಸದಾ ಬಾಗಿಯಾಗುತ್ತಾರೆ.

ಹವ್ಯಾಸಿ ಪತ್ರಕರ್ತರಾಗಿದ್ದು ಕಾಪು ದ್ವಾದಶಿ ಪಬ್ಲಿಸಿಟಿ ನ್ಯೂಸ್ ಸರ್ವಿಸ್ ಇದರ ಆಡಳಿತ ನಿರ್ದೇಶಕರಾಗಿದ್ದು ಗ್ರಾಮೀಣ ಮಟ್ಟದ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ನಿರ್ವಹಿಸುತ್ತಿದ್ದಾರೆ.

ಸಮಾಜ ಸೇವೆಗಾಗಿ ನವದೆಹಲಿಯಲ್ಲಿ ರಾಷ್ಟ್ರಿಯ ಪ್ರಶಸ್ತಿ ಗ್ಲೋರಿ ಆಫ್ ಇಂಡಿಯಾ ಹಾಗೂ ಕೇರಳದಲ್ಲಿ ಕೈರಾಲಿ ಪ್ರಕಾಶನ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದರು.

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರಿಯ ಪ್ರಶಸ್ತಿಗೆ ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆ

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚಾತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಯನ್ನು ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಮೂಲಕ ತಿಳಿಸಿದ್ದಾರೆ ಹಾಗೂ ಈ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ

ಮೊಹಮ್ಮದ್ ಫಾರೂಕ್ ಉದ್ಯಮಿಯಾಗಿದ್ದು ಸ್ನೇಹ ಜೀವಿಯಾಗಿ ಕಾಪು ಪರಿಸರದ ಸಮಾಜ ಸೇವಕರಾಗಿ ಎಲ್ಲರ ಗಮನ ಸೆಳೆದು ನೂರಾರು ಕಡೆ ಗೌರವ ಸನ್ಮಾನ ಪಡೆದುಕೊಂಡಿರುತ್ತಾರೆ ಈಗಾಗಲೇ ಏಶ್ಯನ್ ಫೆಸೀಫಿಕ್ ಗೋಲ್ಡ್ ಸ್ಟಾರ್ ರಾಷ್ಟ್ರಿಯ ಪ್ರಶಸ್ತಿ,ಕರ್ನಾಟಕ ಸರಕಾರ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೇರಳ-ಕರ್ನಾಟಕ ರಾಜ್ಯದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ ಕಾಸರಗೋಡು ಕೈರಳಿ ಪ್ರಕಾಶನ ಇವರಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago