Featured

ಉಡುಪಿ : ಇಂದಿನಿಂದ ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೆ  ಬೂಸ್ಟರ್ ಡೋಸ್ – Vishwanews24

ಉಡುಪಿ : ಇಂದಿನಿಂದ ಜಿಲ್ಲೆಯ ಆರೋಗ್ಯ ಕಾರ್ಯಕರ್ತರಿಗೆ  ಬೂಸ್ಟರ್ ಡೋಸ್ – Vishwanews24

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳಿಗೆ ಇಂದಿನಿಂದ ಬೂಸ್ಟರ್ ಡೋಸ್ ನೀಡಿಕೆ ಪ್ರಾರಂಭಗೊಂಡಿತು.ಕೋವಿಡ್ 3ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೂ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆ ನೀಡಲಾಗುತ್ತಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇವತ್ತು ಬೂಸ್ಟರ್ ಡೋಸ್ ಗೆ ಚಾಲನೆ ನೀಡಲಾಯಿತು.ಈ ಕಾರ್ಯಕ್ರಮದಲ್ಲಿ 2ನೇ ಡೋಸ್ ಕೋವಿಶೀಲ್ಡ್ ಅಥವಾ 2ನೇ ಡೋಸ್ ಕೋವ್ಯಾಕ್ಸಿನ್ ಪಡೆದು 9 ತಿಂಗಳು ಪೂರೈಸಿದವರಿಗೆ (39 ವಾರಗಳು) ಸರಕಾರಿ ಲಸಿಕಾ ಕೇಂದ್ರದಲ್ಲಿ ಉಚಿತ ಮುನ್ನೆಚ್ಚರಿಕೆ (ಬೂಸ್ಟರ್) ಡೋಸ್ ಲಸಿಕೆಯನ್ನು ನೀಡಲಾಗುವುದು. 2 ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮುನ್ನೆಚ್ಚರಿಕೆ ಲಸಿಕಾ ಡೋಸ್ ಆಗಿ ಕೋವಿಶೀಲ್ಡ್ ಲಸಿಕೆಯನ್ನೇ ಪಡೆಯಬೇಕು. ಅದೇ ರೀತಿ 2 ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಮುನ್ನೆಚ್ಚರಿಕೆ ಲಸಿಕಾ ಡೋಸ್ ಆಗಿ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆಯಬೇಕು.

ಮುನ್ನೆಚ್ಚರಿಕೆ ಡೋಸ್ ಪಡೆಯಲು ಆರೋಗ್ಯ ಕಾರ್ಯಕರ್ತರಾಗಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ/ಕ್ಲಿನಿಕ್, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಸರಕಾರಿ ಮತ್ತು ಖಾಸಗಿ ಆಯುಷ್ ಇಲಾಖೆಯ ಅಧಿಕಾರಿಗಳು/ನೌಕರರು/ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಅರ್ಹ ರಿರುತ್ತಾರೆ. 2ನೇ ಡೋಸ್ ಪಡೆದು 9 ತಿಂಗಳು ಪೂರೈಸಿದ್ದನ್ನು ಖಚಿತ ಪಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

8 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

8 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

8 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

11 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago