Featured

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ : ‘‘ಚುನಾವಣಾ ನೀತಿ ಸಂಹಿತೆ ಸೋಮವಾರದಿಂದ ಜಾರಿಗೊಳಿಸಲಾಗಿದ್ದು, ಅದು 2020 ರ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ” ಎಂದು ನವೆಂಬರ್ 30 ರ ಸೋಮವಾರ ಮಣಿಪಾಲದಲ್ಲಿನ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಹೇಳಿದರು.

“ಜಿಲ್ಲೆಯ ಒಟ್ಟು 154 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದೆ. ಏಳು ತಾಲೂಕು ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಉಡುಪಿಯ 16 ಪಂಚಾಯಿತಿಗಳಲ್ಲಿ, ಹೆಬ್ರಿಯ 9 ಪಂಚಾಯಿತಿಗಳು, ಬ್ರಹ್ಮಾವರದ 27 ಪಂಚಾಯಿತಿಗಳು, ಬೈಂದೂರಿನಲ್ಲಿ 15 ಪಂಚಾಯಿತಿಗಳಲ್ಲಿ ನಡೆಯಲಿದೆ. ಎರಡನೇ ಹಂತದ ಚುನಾವಣೆ ಕುಂದಾಪುರದ 44 ಪಂಚಾಯಿತಿಗಳು, ಕಾರ್ಕಳದ 27 ಪಂಚಾಯಿತಿಗಳು ಮತ್ತು ಕಾಪುವಿನ 16 ಪಂಚಾಯಿತಿಗಳಲ್ಲಿ ನಡೆಯಲಿದೆ. ಒಟ್ಟು 87 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

ಮೂಲ ಮತದಾನ ಕೇಂದ್ರಗಳು 890, ಸಹಾಯಕ ಬೂತ್‌ಗಳು 282 ಮತ್ತು ಒಟ್ಟು ಮತದಾನ ಕೇಂದ್ರಗಳು 1172 ಇದೆ. ಒಟ್ಟು ಮಹಿಳಾ ಮತದಾರರ ಸಂಖ್ಯೆ 4,12,887, ಪುರುಷ ಮತದಾರರು ಸಂಖ್ಯೆ 3,82,785 ಹಾಗೂ ಇತರರು 9 ಮಂದಿ ಇದ್ದಾರೆ. ಒಟ್ಟು 7,95,681 ಮತದಾರರು ಮತ ಚಲಾಯಿಸಲಿದ್ದಾರೆ.

”ಉಡುಪಿ ಜಿಲ್ಲಾಡಳಿತವು ಎಲ್ಲಾ ಬೂತ್‌ಗಳಲ್ಲಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

”ಮತದಾರರ ಪಟ್ಟಿಯೂ ಸಿದ್ಧವಾಗಿದೆ. ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಾವು ಅಧಿಕಾರಿಗಳನ್ನು ನೇಮಿಸುತ್ತೇವೆ” ಎಂದು ತಿಳಿಸಿದರು

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

9 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

9 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

10 hours ago