Featured

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ: ಇಂದಿನಿಂದ ಡಿ. 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ : ಜಿಲ್ಲಾಧಿಕಾರಿ ಜಿ ಜಗದೀಶ್‌ -Vishwanews24

ಉಡುಪಿ : ‘‘ಚುನಾವಣಾ ನೀತಿ ಸಂಹಿತೆ ಸೋಮವಾರದಿಂದ ಜಾರಿಗೊಳಿಸಲಾಗಿದ್ದು, ಅದು 2020 ರ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ” ಎಂದು ನವೆಂಬರ್ 30 ರ ಸೋಮವಾರ ಮಣಿಪಾಲದಲ್ಲಿನ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಹೇಳಿದರು.

“ಜಿಲ್ಲೆಯ ಒಟ್ಟು 154 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದೆ. ಏಳು ತಾಲೂಕು ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಉಡುಪಿಯ 16 ಪಂಚಾಯಿತಿಗಳಲ್ಲಿ, ಹೆಬ್ರಿಯ 9 ಪಂಚಾಯಿತಿಗಳು, ಬ್ರಹ್ಮಾವರದ 27 ಪಂಚಾಯಿತಿಗಳು, ಬೈಂದೂರಿನಲ್ಲಿ 15 ಪಂಚಾಯಿತಿಗಳಲ್ಲಿ ನಡೆಯಲಿದೆ. ಎರಡನೇ ಹಂತದ ಚುನಾವಣೆ ಕುಂದಾಪುರದ 44 ಪಂಚಾಯಿತಿಗಳು, ಕಾರ್ಕಳದ 27 ಪಂಚಾಯಿತಿಗಳು ಮತ್ತು ಕಾಪುವಿನ 16 ಪಂಚಾಯಿತಿಗಳಲ್ಲಿ ನಡೆಯಲಿದೆ. ಒಟ್ಟು 87 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

ಮೂಲ ಮತದಾನ ಕೇಂದ್ರಗಳು 890, ಸಹಾಯಕ ಬೂತ್‌ಗಳು 282 ಮತ್ತು ಒಟ್ಟು ಮತದಾನ ಕೇಂದ್ರಗಳು 1172 ಇದೆ. ಒಟ್ಟು ಮಹಿಳಾ ಮತದಾರರ ಸಂಖ್ಯೆ 4,12,887, ಪುರುಷ ಮತದಾರರು ಸಂಖ್ಯೆ 3,82,785 ಹಾಗೂ ಇತರರು 9 ಮಂದಿ ಇದ್ದಾರೆ. ಒಟ್ಟು 7,95,681 ಮತದಾರರು ಮತ ಚಲಾಯಿಸಲಿದ್ದಾರೆ.

”ಉಡುಪಿ ಜಿಲ್ಲಾಡಳಿತವು ಎಲ್ಲಾ ಬೂತ್‌ಗಳಲ್ಲಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

”ಮತದಾರರ ಪಟ್ಟಿಯೂ ಸಿದ್ಧವಾಗಿದೆ. ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಾವು ಅಧಿಕಾರಿಗಳನ್ನು ನೇಮಿಸುತ್ತೇವೆ” ಎಂದು ತಿಳಿಸಿದರು

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

7 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

12 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

12 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

13 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

13 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

13 hours ago