ಉಡುಪಿ, : ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಈ ರೈಲು ಜು.20, 21, 22ರಂದು -ಶನಿವಾರ, ರವಿವಾರ, ಸೋಮವಾರ – ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಟಿರುವ ಮೆಮು ರೈಲು ಅಪರಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರು ಪ್ರಯಾಣದಲ್ಲಿ ಅಪರಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7:00 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಉಳಿದ ಎರಡು ದಿನಗಳಲ್ಲಿ ರೈಲು ಇದೇ ಸಮಯದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ
ಈ ರೈಲಿಗೆ ಕಣಕೋಣ, ಕಾರವಾರ, ಹರ್ವಾಡ, ಅಂಕೋಲ, ಗೋರ್ಕಣ ರೋಡ್, ಮಿರ್ಜಾನ, ಕುಮಟ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರಕೂರು, ಉಡುಪಿ, ಮುಲ್ಕಿ, ಸುರತ್ಕಲ್, ತೋಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…