ಉಡುಪಿ, : ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಈ ರೈಲು ಜು.20, 21, 22ರಂದು -ಶನಿವಾರ, ರವಿವಾರ, ಸೋಮವಾರ – ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಟಿರುವ ಮೆಮು ರೈಲು ಅಪರಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರು ಪ್ರಯಾಣದಲ್ಲಿ ಅಪರಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7:00 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಉಳಿದ ಎರಡು ದಿನಗಳಲ್ಲಿ ರೈಲು ಇದೇ ಸಮಯದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ
ಈ ರೈಲಿಗೆ ಕಣಕೋಣ, ಕಾರವಾರ, ಹರ್ವಾಡ, ಅಂಕೋಲ, ಗೋರ್ಕಣ ರೋಡ್, ಮಿರ್ಜಾನ, ಕುಮಟ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರಕೂರು, ಉಡುಪಿ, ಮುಲ್ಕಿ, ಸುರತ್ಕಲ್, ತೋಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…