ಉಡುಪಿ; ಆಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸದಿಂದ ಭಾರತ ಮತ್ತು ಅಮೇರಿಕಾ ಸಂಬಂಧ ಮತ್ತಷ್ಟು ಗಟ್ಟಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಇಂದು ಇಡೀ ಜಗತ್ತು ಭಾರತದ ಕಡೆ ನೋಡುತ್ತಿದ್ದು, ಭಾರತೀಯ ಸಂಸ್ಕೃತಿ ಮೋದಿಯಿಂದ ಜಗತ್ತಿಗೆ ಪರಿಚಯ ಆಗುತ್ತಿದೆ . ಟ್ರಂಪ್ ಪ್ರವಾಸ ಗುಜರಾತ್ ನಿಂದ ಆರಂಭವಾಗುತ್ತಿದೆ ಭಾರತ ಮತ್ತು ಅಮೇರಿಕಾ ಸಂಬಂಧ ಮತ್ತಷ್ಟು ಗಟ್ಟಿ ಆಗಲಿದೆ. ಭಾರತಕ್ಕೆ ಎಲ್ಲಾ ನೆರವು ಅಮೇರಿಕಾದಿಂದ ಸಿಗಲಿದೆ ಎಂದರು.
ವಿಪಕ್ಷಗಳು ವಿರೋಧಕ್ಕೆ ವಿರೋಧ ಮಾಡುತ್ತಿದೆ ಬಿಜೆಪಿಯ ಎಲ್ಲವನ್ನು ಟೀಕೆ ಮಾಡೂದು ಕಾಂಗ್ರೆಸ್ ಜಾಯಮಾನ ಅವರದ್ದಾಗಿದ್ದು, ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿದೆ. ರಾಷ್ಟ್ರದ ಪರಿಕಲ್ಪನೆ ಕಾಂಗ್ರೆಸ್ ಗೆ ಇಲ್ಲ. ಕಾಂಗ್ರೆಸ್ ಆಡಳಿತ ಇರುವಾಗ ಒಬಾಮಾ ಬಂದಿಲ್ವಾ? ಒಬಾಮಾ ಲೋಕಸಭೆಯಲ್ಲಿ ಭಾಷಣ ಮಾಡಿದ್ದರು ಕಾಂಗ್ರೆಸ್ ಆವಾಗ ಕಣ್ಮುಚ್ಚಿ ಕೂತಿದ್ಯಾಕೆ? ಎಂದು ಪ್ರಶ್ನಿಸಿದರು.
ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ನಳಿನ್ ನಾವು ಹಾಲಿನ ಜೊತೆ ಸಕ್ಕರೆ ತರ ಇದ್ದೇವೆ ಭಿನ್ನಮತ ನಮ್ಮಲ್ಲಿ ಇಲ್ಲ ಭಿನ್ನಮತ ಮಾಧ್ಯಮದಲ್ಲಿ ಇದ್ಯಾ ಅಂತ ನನಗೆ ಸಂಶಯ ಬಿಜೆಪಿಯಲ್ಲಿ ಮೂಲ ಬಂದವರು, ಹೋದವರಿಲ್ಲ ಬಂದವರೆಲ್ಲರೂ ನಮ್ಮಜೊತೆ ಒಂದಾಗಿದ್ದಾರೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…