Featured

ಉಡುಪಿ : ಇಂದು ಕುಮಾರ ಸ್ವಾಮಿ ಪ್ರಮೋದ್ ಮಧ್ವರಾಜ್ ಪರ ಮತ ಯಾಚನೆ – Vishwanews24

ಉಡುಪಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸಂಜೆ 5 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದಲ್ಲಿ ಉಸ್ತುವಾರಿ ಸಚಿವೆ ಡಾ| ಜಯಮಾಲಾ, ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ, ಜೆಡಿಎಸ್‌ ಮುಖಂಡ ವೈ.ಎಸ್‌.ವಿ. ದತ್ತ, ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ, ಅಮರನಾಥ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಕಾಂಗ್ರೆಸ್‌ ಮುಖಂಡ ರಾಕೇಶ್‌ ಮಲ್ಲಿ ಹಾಗೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಹಿರಿಯ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಸಂದರ್ಭ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ.

ಸಭೆಯಲ್ಲಿ ಮೈತ್ರಿ ಪಕ್ಷಗಳ ವಿವಿಧ‌ ಕ್ಷೇತ್ರ ಸಮಿತಿ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಬೂತ್‌ ಕಮಿಟಿ ಅಧ್ಯಕ್ಷರು ಮತ್ತು ಎಲ್ಲ ವಿಭಾಗಗಳ ಪದಾಧಿಕಾರಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಮತ್ತು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

1 hour ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

5 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

6 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

6 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

6 hours ago

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ  ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…

6 hours ago