ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ ಮೂಲಕ ಪುರಪ್ರವೇಶ ಮಾಡಲಿದ್ದಾರೆ.
ಶೀರೂರು ಶ್ರೀಗಳು ಪರ್ಯಟನ ಬಳಿಕ ಶೀರೂರು ಮೂಲಮಠಕ್ಕೆ ಆಗಮಿಸಲಿದ್ದು, ಅಲ್ಲಿಂದ ಪಟ್ಟದ ದೇವರ ಸಮೇತ ಕಡಿಯಾಳಿಗೆ ಆಗಮಿಸಿ, ಅಲ್ಲಿ ಶ್ರೀಮಹಿಷಮರ್ದಿನಿ ದೇವರ ದರ್ಶನದ ಬಳಿಕ ಭವ್ಯ ಶೋಭಾ ಯಾತ್ರೆಯಲ್ಲಿ ಪುರಪ್ರವೇಶ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಶೋಭಾ ಯಾತ್ರೆಯಲ್ಲಿ ಕರೆತರಲಾಗುವುದು. ಪುರಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುರಪ್ರವೇಶ ಮೆರವಣಿಗೆ ಕಡಿಯಾಳಿಯಿಂದ ಹೊರಟು ಸಿಟಿಬಸ್ ಸ್ಟಾಂಡ್ ಹನುಮಾನ್ ವೃತ್ತ ಕನಕದಾಸ ರಸ್ತೆ ಮೂಲಕ ಕೃಷ್ಣ ಮಠ ತಲುಪಲಿದೆ. 1000ಕ್ಕೂ ಅಧಿಕ ಭಜಕರು, ಉಡುಪಿಯ ಸ್ಥಳೀಯ ಜಾನಪದ ತಂಡಗಳು, ವಿವಿಧ ಕಲಾತಂಡ, ಸಾಂಸ್ಕೃತಿಕ ತಂಡಗಳು ಹಾಗೂ ವಿಶೇಷ ಟ್ಯಾಬ್ಲೊಗಳು ಮೆರವಣಿಗೆಗೆ ಮೆರುಗು ನೀಡಲಿವೆ ಶೀರೂರು ಶ್ರೀಗಳು ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ವಿವಿಧ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ ರಥಬೀದಿಯಲ್ಲಿ ಹಾಕಲಾಗುವ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಪೌರ ಸಮ್ಮಾನವನ್ನು ಸ್ವೀಕರಿಸುವರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…