ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ ಮೂಲಕ ಪುರಪ್ರವೇಶ ಮಾಡಲಿದ್ದಾರೆ.
ಶೀರೂರು ಶ್ರೀಗಳು ಪರ್ಯಟನ ಬಳಿಕ ಶೀರೂರು ಮೂಲಮಠಕ್ಕೆ ಆಗಮಿಸಲಿದ್ದು, ಅಲ್ಲಿಂದ ಪಟ್ಟದ ದೇವರ ಸಮೇತ ಕಡಿಯಾಳಿಗೆ ಆಗಮಿಸಿ, ಅಲ್ಲಿ ಶ್ರೀಮಹಿಷಮರ್ದಿನಿ ದೇವರ ದರ್ಶನದ ಬಳಿಕ ಭವ್ಯ ಶೋಭಾ ಯಾತ್ರೆಯಲ್ಲಿ ಪುರಪ್ರವೇಶ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಶೋಭಾ ಯಾತ್ರೆಯಲ್ಲಿ ಕರೆತರಲಾಗುವುದು. ಪುರಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುರಪ್ರವೇಶ ಮೆರವಣಿಗೆ ಕಡಿಯಾಳಿಯಿಂದ ಹೊರಟು ಸಿಟಿಬಸ್ ಸ್ಟಾಂಡ್ ಹನುಮಾನ್ ವೃತ್ತ ಕನಕದಾಸ ರಸ್ತೆ ಮೂಲಕ ಕೃಷ್ಣ ಮಠ ತಲುಪಲಿದೆ. 1000ಕ್ಕೂ ಅಧಿಕ ಭಜಕರು, ಉಡುಪಿಯ ಸ್ಥಳೀಯ ಜಾನಪದ ತಂಡಗಳು, ವಿವಿಧ ಕಲಾತಂಡ, ಸಾಂಸ್ಕೃತಿಕ ತಂಡಗಳು ಹಾಗೂ ವಿಶೇಷ ಟ್ಯಾಬ್ಲೊಗಳು ಮೆರವಣಿಗೆಗೆ ಮೆರುಗು ನೀಡಲಿವೆ ಶೀರೂರು ಶ್ರೀಗಳು ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ವಿವಿಧ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ ರಥಬೀದಿಯಲ್ಲಿ ಹಾಕಲಾಗುವ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಪೌರ ಸಮ್ಮಾನವನ್ನು ಸ್ವೀಕರಿಸುವರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…