ಉಡುಪಿ: ಶಿರೂರು ಶ್ರೀಗಳ ನಿಧನದಿಂದಾಗಿ ಸುಮಾರು ಮೂರು ವರ್ಷಗಳಿಂದ ತೆರವಾಗಿದ್ದ ಉತ್ತರಾಧಿಕಾರಿಯ ಅಧಿಕೃತ ಘೋಷಣೆ ಇಂದು ನಡೆಯಲಿದೆ. ಈಗಾಗಲೇ ಮಠಕ್ಕೆ ನೂತನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗಿದೆ. ಮಠದ ಹಿರಿಯ ಯತಿಗಳಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಮೃತ ಪಟ್ಟು ಸುಮಾರು ಮೂರು ವರ್ಷಗಳ ಬಳಿಕ ಉತ್ತರಾಧಿಕಾರಿಯ ನೇಮಕ ನಡೆಯುತ್ತಿದೆ.
ನೂತನ ಮಠಾಧಿಪತಿಯ ಹೆಸರು ಹಾಗೂ ಪಟ್ಟಾಭಿಷೇಕದ ಕುರಿತು ಇಂದು ಶಿರೂರು ಮೂಲ ಮಠದಲ್ಲಿ ಮಾಹಿತಿ ನೀಡಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ. ಶಿರೂರು ಮಠದ 31ನೇ ಉತ್ತರಾಧಿಕಾರಿ ನಿಡ್ಲೆ ಮೂಲದವರು.
ಜುಲೈ 19, 2018ರಂದು ಶಿರೂರು ಮಠದ ಹಿರಿಯ ಯತಿ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನರಾಗಿದ್ದರು. ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಬೇಕು ಎಂಬ ಒತ್ತಾಯ ಶ್ರೀಗಳ ಅಭಿಮಾನಿಗಳಿಂದ ಕೇಳಿಬಂದಿತ್ತು.ಈ ಮಧ್ಯೆ ಶಿರೂರು ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಉತ್ತರಾಧಿಕಾರಿ ಆಯ್ಕೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…