ಉಡುಪಿ: ಶಿರೂರು ಶ್ರೀಗಳ ನಿಧನದಿಂದಾಗಿ ಸುಮಾರು ಮೂರು ವರ್ಷಗಳಿಂದ ತೆರವಾಗಿದ್ದ ಉತ್ತರಾಧಿಕಾರಿಯ ಅಧಿಕೃತ ಘೋಷಣೆ ಇಂದು ನಡೆಯಲಿದೆ. ಈಗಾಗಲೇ ಮಠಕ್ಕೆ ನೂತನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗಿದೆ. ಮಠದ ಹಿರಿಯ ಯತಿಗಳಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಮೃತ ಪಟ್ಟು ಸುಮಾರು ಮೂರು ವರ್ಷಗಳ ಬಳಿಕ ಉತ್ತರಾಧಿಕಾರಿಯ ನೇಮಕ ನಡೆಯುತ್ತಿದೆ.
ನೂತನ ಮಠಾಧಿಪತಿಯ ಹೆಸರು ಹಾಗೂ ಪಟ್ಟಾಭಿಷೇಕದ ಕುರಿತು ಇಂದು ಶಿರೂರು ಮೂಲ ಮಠದಲ್ಲಿ ಮಾಹಿತಿ ನೀಡಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ. ಶಿರೂರು ಮಠದ 31ನೇ ಉತ್ತರಾಧಿಕಾರಿ ನಿಡ್ಲೆ ಮೂಲದವರು.
ಜುಲೈ 19, 2018ರಂದು ಶಿರೂರು ಮಠದ ಹಿರಿಯ ಯತಿ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನರಾಗಿದ್ದರು. ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಬೇಕು ಎಂಬ ಒತ್ತಾಯ ಶ್ರೀಗಳ ಅಭಿಮಾನಿಗಳಿಂದ ಕೇಳಿಬಂದಿತ್ತು.ಈ ಮಧ್ಯೆ ಶಿರೂರು ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಉತ್ತರಾಧಿಕಾರಿ ಆಯ್ಕೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…