ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು ಶಾರದಾ ಕಲ್ಯಾಣ ಮಂಟಪದಿಂದ ರಾ.ಹೆ-169(ಎ) ರ ಮಾರ್ಗವಾಗಿ ಶಿರಿಬೀಡು ಜಂಕ್ಷನ್ ತಲುಪಿ ಅಲ್ಲಿಂದ ಸರ್ವೀಸ್ ಬಸ್ ನಿಲ್ದಾಣ-ತ್ರಿವೇಣಿ ಜಂಕ್ಷನ್- ಕನಕದಾಸ ರಸ್ತೆ ಮಾರ್ಗವಾಗಿ ಶೀರೂರು ಮಠ ತಲುಪಲಿದೆ. ಆದ್ದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಗಳು ಉಂಟಾಗುವುದರಿಂದ ವಾಹನ ಸಂಚಾರದಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ವಾಹನ ಸಂಚಾರದ ಬದಲಿ ಮಾರ್ಗ ಈ ಕೆಳಕಂಡಂತಿದೆ:
ಮಣಿಪಾಲದಿಂದ ಉಡುಪಿ ನಗರಕ್ಕೆ ಹೋಗುವಂತಹ ವಾಹನಗಳು ಎಂ.ಜಿ.ಎಂ ಎದುರಿನ ಸುನಾಗ್ ಆಸ್ಪತ್ರೆ ಬಳಿ ಎಡ ತಿರುವು ಪಡೆದು ಸುದೀಂದ್ರ ಕಲ್ಯಾಣ ಮಂಟಪ ಮಾರ್ಗವಾಗಿ ಎಸ್.ಕೆ.ಎಂ ಬಳಿ ಎಡ ತಿರುವು ಪಡೆದು ಬೀಡಿನಗುಡ್ಡೆ-ಚಿಟ್ನಾಡಿ-ಅಮ್ಮಣ್ಣಿ ರಾಮಣ್ಣ ಹಾಲ್ ಮುಂದಿನ ರಸ್ತೆಯಿಂದ ಮಿಷನ್ ಕಂಪೌಂಡ್ -ಜೋಡುಕಟ್ಟೆ ತಲುಪಿ ಉಡುಪಿ ನಗರಕ್ಕೆ ತೆರಳುವುದು.
ಶಿರಬೀಡು ಜಂಕ್ಷನ್ ನಿಂದ ಕಿದಿಯೂರು ಹೋಟೆಲ್ ಮೂಲಕ ಸರ್ವೀಸ್ ಬಸ್ ನಿಲ್ಯಾಣದ ವರೆಗಿನ ಏಕಮುಖ ಸಂಚಾರ ವ್ಯವಸ್ಥೆಯ ರಸ್ತೆಯಲ್ಲಿ ಮೆರವಣಿಗೆ ಪ್ರವೇಶಿಸುವ ಸಮಯದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಒಲ್ಡ್ ಡಯಾನ ಸರ್ಕಲ್ ನಿಂದ ಮಿತ್ರ ಪ್ರಿಯಾ ಜಂಕ್ಷನ್ ಮುಖೇನಾ ಚಿತ್ತರಂಜನ್ ಸರ್ಕಲ್, ಸಂಸ್ಕೃತ ಕಾಲೇಜ್ ಜಂಕ್ಷನ್, ಜಾಮೀಯಾ ಮಸೀದಿ ಜಂಕ್ಷನ್ ನಿಂದ ಎಡತಿರುವು ಪಡೆದು ಸರ್ವೀಸ್ ಬಸ್ ನಿಲ್ದಾಣ ತಲುಪುವುದು.
ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…