ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಅದು ಗುರು-ಶುಕ್ರ ಗ್ರಹಗಳು ತಮ್ಮ ಮೋಡಿಯನ್ನು ಮೆರೆಯಲಿದ್ದಾವೆ. ಇಂದು ಸಂಜೆ ವೇಳೆಗೆ ಪಶ್ಚಿಮದ ಆಕಾಶದಲ್ಲಿ ಗುರು-ಶುಕ್ರರ ಜೋಡಿ ಅರ್ಧ ಡಿಗ್ರಿ ಸಮೀಪದಿಂದ ಕಾಣಿಸಲಿದೆ.
ಇದು ಬರಿಗಣ್ಣಿಗೆ ಕಾಣುವ ಅತಿ ಸುಂದರ ಗ್ರಹಗಳ ಜೋಡಿಯಾಟವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಭೌತಶಾಸ್ತ್ರಜ್ಞ ಡಾ.ಎ.ಪಿ ಭಟ್ ಅವರು, ಕೆಲ ದಿನಗಳಿಂದ ಪಶ್ಚಿಮದ ಆಕಾಶದಲ್ಲಿ ಸಂಜೆಯಾಗುತ್ತಿದ್ದಂತೆ ಸೂರ್ಯಸ್ತಕ್ಕೆ ಹಿಡಿದ ಅವಳಿ ದೀವಟಿಯೋ ಎನ್ನುವಂತೆ ಅಕ್ಕಪಕ್ಕದಲ್ಲಿ ಗುರು ಮತ್ತು ಶುಕ್ರ ಗ್ರಹ ಹೊಳೆಯುತ್ತಿವೆ. ಶುಕ್ರ ಭೂಮಿಯಿಂದ ಈಗ ಸುಮಾರು 20.5 ಕೋಟಿ ಕಿಲೋ ಮೀಟರ್ ದೂರದಲ್ಲಿದ್ದರೇ, ಗುರು ಭೂಮಿಯಿಂದ 86 ಕೋಟಿ ಕಿಲೋ ಮೀಟರ್ ದೂರದಲ್ಲಿದೆ ಎಂದು ತಿಳಿಸಿದ್ದಾರೆ.
ಗುರು ಗ್ರಹದ ಗಾತ್ರ ಶುಕ್ರನಿಗಿಂತ ಸುಮಾರು 1,400 ಪಟ್ಟು ದೊಡ್ಡದು. ಆದರೂ ಶುಕ್ರ ಫಳಪಳ ಹೊಳೆಯುತ್ತಿದೆ. ಶುಕ್ರನ ಹೊಳೆಪಿಗೆ ಆ ಗ್ರಹದ ವಾತಾವರಣವೇ ಕಾರಣ. ಈ ಗ್ರಹದ ವಾತಾವರಣದಲ್ಲಿ ಕಾರ್ಬನ್ ಆಕ್ಸೈಡ್ ಹಾಗೂ ಸಲ್ಫೆರ್ ಡೈ ಆಕ್ಸೈಡ್ ನ ತೆಳು ಕವಚ ಸುಮಾರು 80 ಅಂಶ ಸೂರ್ಯನ ಬೆಳಕನ್ನು ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.
ಇಂದು ಸಂಜೆ ಗುರು ಹಾಗೂ ಶುಕ್ರ ಗ್ರಹಗಳು ಸಮೀಪದಿಂದ ಜೋಡಿಯ ರೀತಿಯಲ್ಲಿ ನಭೋಮಂಡಲದಲ್ಲಿ ಕಾಣಲಿದ್ದಾವೆ. ಜನರು ಈ ಬೆರಗಿನ ಮೋಡಿಯನ್ನು ಕಣ್ ತುಂಬಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…