Featured

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿ – ‘ಗುರು-ಶುಕ್ರ ಗ್ರಹ’ಗಳ ಜೋಡಿ – Vishwanews24

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿ – ‘ಗುರು-ಶುಕ್ರ ಗ್ರಹ’ಗಳ ಜೋಡಿ

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಅದು ಗುರು-ಶುಕ್ರ ಗ್ರಹಗಳು ತಮ್ಮ ಮೋಡಿಯನ್ನು ಮೆರೆಯಲಿದ್ದಾವೆ. ಇಂದು ಸಂಜೆ ವೇಳೆಗೆ ಪಶ್ಚಿಮದ ಆಕಾಶದಲ್ಲಿ ಗುರು-ಶುಕ್ರರ ಜೋಡಿ ಅರ್ಧ ಡಿಗ್ರಿ ಸಮೀಪದಿಂದ ಕಾಣಿಸಲಿದೆ.

ಇದು ಬರಿಗಣ್ಣಿಗೆ ಕಾಣುವ ಅತಿ ಸುಂದರ ಗ್ರಹಗಳ ಜೋಡಿಯಾಟವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಭೌತಶಾಸ್ತ್ರಜ್ಞ ಡಾ.ಎ.ಪಿ ಭಟ್ ಅವರು, ಕೆಲ ದಿನಗಳಿಂದ ಪಶ್ಚಿಮದ ಆಕಾಶದಲ್ಲಿ ಸಂಜೆಯಾಗುತ್ತಿದ್ದಂತೆ ಸೂರ್ಯಸ್ತಕ್ಕೆ ಹಿಡಿದ ಅವಳಿ ದೀವಟಿಯೋ ಎನ್ನುವಂತೆ ಅಕ್ಕಪಕ್ಕದಲ್ಲಿ ಗುರು ಮತ್ತು ಶುಕ್ರ ಗ್ರಹ ಹೊಳೆಯುತ್ತಿವೆ. ಶುಕ್ರ ಭೂಮಿಯಿಂದ ಈಗ ಸುಮಾರು 20.5 ಕೋಟಿ ಕಿಲೋ ಮೀಟರ್ ದೂರದಲ್ಲಿದ್ದರೇ, ಗುರು ಭೂಮಿಯಿಂದ 86 ಕೋಟಿ ಕಿಲೋ ಮೀಟರ್ ದೂರದಲ್ಲಿದೆ ಎಂದು ತಿಳಿಸಿದ್ದಾರೆ.

ಗುರು ಗ್ರಹದ ಗಾತ್ರ ಶುಕ್ರನಿಗಿಂತ ಸುಮಾರು 1,400 ಪಟ್ಟು ದೊಡ್ಡದು. ಆದರೂ ಶುಕ್ರ ಫಳಪಳ ಹೊಳೆಯುತ್ತಿದೆ. ಶುಕ್ರನ ಹೊಳೆಪಿಗೆ ಆ ಗ್ರಹದ ವಾತಾವರಣವೇ ಕಾರಣ. ಈ ಗ್ರಹದ ವಾತಾವರಣದಲ್ಲಿ ಕಾರ್ಬನ್ ಆಕ್ಸೈಡ್ ಹಾಗೂ ಸಲ್ಫೆರ್ ಡೈ ಆಕ್ಸೈಡ್ ನ ತೆಳು ಕವಚ ಸುಮಾರು 80 ಅಂಶ ಸೂರ್ಯನ ಬೆಳಕನ್ನು ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.

ಇಂದು ಸಂಜೆ ಗುರು ಹಾಗೂ ಶುಕ್ರ ಗ್ರಹಗಳು ಸಮೀಪದಿಂದ ಜೋಡಿಯ ರೀತಿಯಲ್ಲಿ ನಭೋಮಂಡಲದಲ್ಲಿ ಕಾಣಲಿದ್ದಾವೆ. ಜನರು ಈ ಬೆರಗಿನ ಮೋಡಿಯನ್ನು ಕಣ್ ತುಂಬಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

7 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

13 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago