Featured

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು – Vishwanews24

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು

ಉಡುಪಿ: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ಅವರು “ಈ ರಸ್ತೆ ಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ಬೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಾರೆ. ಸ್ವತಹ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಕೂಡಾ ಅವರ ಕಣ್ಣಿಗೂ ಈ ರಸ್ತೆಯ ಸಮಸ್ಯೆ ಕಂಡು ಬಂದಿಲ್ಲ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವಾರ್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ ಪ್ರಶ್ನೆ ಮಾಡುವುದಿಲ್ಲ. ಮಾನ್ಯ ಪ್ರಧಾನ ಮಂತ್ರಿಗಳು ಉಡುಪಿಗೆ ಬಂದು ಜನರ ಸಮಸ್ಯೆ ಬಗೆಹರಿಸಲಿ. ಈ ರಸ್ತೆಯಲ್ಲಿ ಬೀದಿ ದೀಪ ಕೂಡಾ ಇಲ್ಲ. ಇದರಿಂದಾಗಿ ದನ ಕರುಗಳು ಸಾಯುತ್ತವೆ. ದನ ಕರುಗಳ ಹೆಸರಿನಲ್ಲಿ ವೋಟ್ ತೆಗೆದುಕೊಳ್ಳುವ ಇವರಿಗೆ ಇದು ಕಾಣುವುದಿಲ್ಲವಾ. ಮೊನ್ನೆ ಮುಖ್ಯಮಂತ್ರಿಯವರು ಬರುವ ಸಂಧರ್ಭದಲ್ಲಿ ಹಾಕಿದ ಡಾಮಾರ್ ಒಂದೇ ದಿನದಲ್ಲಿ ಕಿತ್ತು ಬಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದ್ರಾಳಿಯ ಈ ಭಾಗದಲ್ಕಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತಿದ್ದು ದ್ವಿಚಕ್ರ ಮತ್ತು ಇತರ ವಾಹನಗಳು ನಿರಂತರವಾಗಿ ಅಪಘಾತಕ್ಕೀಡಾಗಿ ಜನರು ಸಂಕಷ್ಟ ಅನುಭವಿಸುತಿದ್ದಾರೆ.

ಬಂಟ್ವಾಳ: ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಆದಾಯದಿಂದ ಬಸ್‌ ಖರೀದಿಸಿದ ಸರ್ಕಾರಿ ಶಾಲೆ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

17 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

18 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

18 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

19 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

20 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

20 hours ago