Featured

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು – Vishwanews24

ಉಡುಪಿ: ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಖಂಡಿಸಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟಿಸಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು

ಉಡುಪಿ: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆ ಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ಅವರು “ಈ ರಸ್ತೆ ಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ಬೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಾರೆ. ಸ್ವತಹ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಕೂಡಾ ಅವರ ಕಣ್ಣಿಗೂ ಈ ರಸ್ತೆಯ ಸಮಸ್ಯೆ ಕಂಡು ಬಂದಿಲ್ಲ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವಾರ್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ ಪ್ರಶ್ನೆ ಮಾಡುವುದಿಲ್ಲ. ಮಾನ್ಯ ಪ್ರಧಾನ ಮಂತ್ರಿಗಳು ಉಡುಪಿಗೆ ಬಂದು ಜನರ ಸಮಸ್ಯೆ ಬಗೆಹರಿಸಲಿ. ಈ ರಸ್ತೆಯಲ್ಲಿ ಬೀದಿ ದೀಪ ಕೂಡಾ ಇಲ್ಲ. ಇದರಿಂದಾಗಿ ದನ ಕರುಗಳು ಸಾಯುತ್ತವೆ. ದನ ಕರುಗಳ ಹೆಸರಿನಲ್ಲಿ ವೋಟ್ ತೆಗೆದುಕೊಳ್ಳುವ ಇವರಿಗೆ ಇದು ಕಾಣುವುದಿಲ್ಲವಾ. ಮೊನ್ನೆ ಮುಖ್ಯಮಂತ್ರಿಯವರು ಬರುವ ಸಂಧರ್ಭದಲ್ಲಿ ಹಾಕಿದ ಡಾಮಾರ್ ಒಂದೇ ದಿನದಲ್ಲಿ ಕಿತ್ತು ಬಂದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದ್ರಾಳಿಯ ಈ ಭಾಗದಲ್ಕಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತಿದ್ದು ದ್ವಿಚಕ್ರ ಮತ್ತು ಇತರ ವಾಹನಗಳು ನಿರಂತರವಾಗಿ ಅಪಘಾತಕ್ಕೀಡಾಗಿ ಜನರು ಸಂಕಷ್ಟ ಅನುಭವಿಸುತಿದ್ದಾರೆ.

ಬಂಟ್ವಾಳ: ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಆದಾಯದಿಂದ ಬಸ್‌ ಖರೀದಿಸಿದ ಸರ್ಕಾರಿ ಶಾಲೆ – Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago