Featured

ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ  – vishwanews24

ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ :  ಜಿಲ್ಲಾಧಿಕಾರಿ

 ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçà ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

 ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟಿçà ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

 ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ ಆರು ತಿಂಗಳಿನಿA ನಾವುಗಳು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಯ ವೇಗವಾಗಿ ಆಗುತ್ತಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.

ಈಗಾಗಲೇ ಕಬ್ಬಿಣದ ಗರ್ಡಲ್ಸ್ನ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣಗೊಂಡಿದೆ. ಇವುಗಳ ಇನ್ಸ್ಫೆಕ್ಷನ್ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟಿçà ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದ ಅವರು, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆಯಾಗಿ ಕೈಗೊಳ್ಳಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು

ರಾಷ್ಟಿçà ಹೆದ್ದಾರಿ 169 ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳನ್ನು ಬದಲಾವಣೆ ಕಾರ್ಯವನ್ನು ಆದಷ್ಟು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲೀಕರು ಇದಕ್ಕೆ ಸಹಕರಿಸಬೇಕು. ಭೂ ಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕೆಂದರು.

  ರಾಷ್ಟಿçà ಹೆದ್ದಾರಿ 66 ಸಂತೆಕಟ್ಟೆAಬಲಪಾಡಿಯ ಅಂಡರ್ಪಾಸ್ ರಸ್ತೆಯ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಆಗುವ ಸಾಧ್ಯತೆ ಇರುತ್ತದೆ ಎಂದರು.   

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ರಾಷ್ಟಿçà ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿಚಿಕ್ಕಮಗಳೂರು ರಾಷ್ಟಿçà ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

14 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

18 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

18 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

18 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

19 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

19 hours ago