ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ದಿಬ್ಬ ಹತ್ತಬೇಕಾದ ಸ್ಥಿತಿಯು ನಿರ್ಮಾಣವಾಗಿದೆ.
ಸಾರ್ವಜನಿಕರು ರಸ್ತೆ ದಾಟಬೇಕಾದ ಸ್ಥಳವು ಬಹಳ ಎತ್ತರ ಪ್ರದೇಶದಲ್ಲಿದ್ದು, ಮೆಟ್ಟಿಲುಗಳಿಲ್ಲದೆ ಸಮಸ್ಯೆ ಉದ್ಭವಿಸಿದೆ. ಚಿಕ್ಕಪುಟ್ಟ ಮಕ್ಕಳು, ಹಿರಿಯನಾಗರಿಕರು, ಮಹಿಳೆಯರು, ಕಂಕುಳದಲ್ಲಿ ಮಗು ಹೊತ್ತುಕೊಂಡು ಸಾಗುವವರು ರಸ್ತೆ ದಾಟುವುದೇ ಸಾಹಸವಾಗಿದೆ. ದಿನ ನಿತ್ಯ ಸಾವಿರಾರು ಜನರು ಇಂದ್ರಾಳಿಯ ಹಳೆ ಮೇಲ್ಸೇತುವೆ ಹೆದ್ದಾರಿಯಿಂದ ಹೊಸ ಮೆಲ್ಸೇತುವೆ ಕಡೆಗೆ ದಾಟುವುದು ಕಂಡುಬರುತ್ತದೆ.
ನಿತ್ಯವು ಇಲ್ಲಿ ಸಾರ್ವಜನಿಕರು ಆಯಾತಪ್ಪಿ ಬಿದ್ದು ಗಾಯಾಳುಗಳಾಗುವ ಘಟನೆಗಳು ನಡೆಯುತ್ತಿರುವುತ್ತಿದೆ. ತುರ್ತಾಗಿ ಈ ಸೂಕ್ಷ್ಮ ಸ್ಥಳದಲ್ಲಿ ಮೆಟ್ಟಿಲು ನಿರ್ಮಾಣ ಮಾಡಬೇಕಾಗಿದೆ. ಉಡುಪಿ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಮಸ್ಯೆಯತ್ತ ಗಮನಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…