ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ದಿಬ್ಬ ಹತ್ತಬೇಕಾದ ಸ್ಥಿತಿಯು ನಿರ್ಮಾಣವಾಗಿದೆ.
ಸಾರ್ವಜನಿಕರು ರಸ್ತೆ ದಾಟಬೇಕಾದ ಸ್ಥಳವು ಬಹಳ ಎತ್ತರ ಪ್ರದೇಶದಲ್ಲಿದ್ದು, ಮೆಟ್ಟಿಲುಗಳಿಲ್ಲದೆ ಸಮಸ್ಯೆ ಉದ್ಭವಿಸಿದೆ. ಚಿಕ್ಕಪುಟ್ಟ ಮಕ್ಕಳು, ಹಿರಿಯನಾಗರಿಕರು, ಮಹಿಳೆಯರು, ಕಂಕುಳದಲ್ಲಿ ಮಗು ಹೊತ್ತುಕೊಂಡು ಸಾಗುವವರು ರಸ್ತೆ ದಾಟುವುದೇ ಸಾಹಸವಾಗಿದೆ. ದಿನ ನಿತ್ಯ ಸಾವಿರಾರು ಜನರು ಇಂದ್ರಾಳಿಯ ಹಳೆ ಮೇಲ್ಸೇತುವೆ ಹೆದ್ದಾರಿಯಿಂದ ಹೊಸ ಮೆಲ್ಸೇತುವೆ ಕಡೆಗೆ ದಾಟುವುದು ಕಂಡುಬರುತ್ತದೆ.
ನಿತ್ಯವು ಇಲ್ಲಿ ಸಾರ್ವಜನಿಕರು ಆಯಾತಪ್ಪಿ ಬಿದ್ದು ಗಾಯಾಳುಗಳಾಗುವ ಘಟನೆಗಳು ನಡೆಯುತ್ತಿರುವುತ್ತಿದೆ. ತುರ್ತಾಗಿ ಈ ಸೂಕ್ಷ್ಮ ಸ್ಥಳದಲ್ಲಿ ಮೆಟ್ಟಿಲು ನಿರ್ಮಾಣ ಮಾಡಬೇಕಾಗಿದೆ. ಉಡುಪಿ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಮಸ್ಯೆಯತ್ತ ಗಮನಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…